- Advertisement -
- Advertisement -
ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿದ ಕಾರು ಅಂಗಡಿಯ ಮುಂದೆ ವರಾಂಡದಲ್ಲಿ ಮೇಲೆ ಹರಿದು ಓರ್ವ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ಇಂದು ಮುಂಜಾನೆ ಬೇಕಲ ಠಾಣಾ ವ್ಯಾಪ್ತಿಯ ಕೋಟಿಕುಳದಲ್ಲಿ ನಡೆದಿದೆ. ಮೃತಪಟ್ಟವರನ್ನು ವಿಷ್ಣು ಪ್ರಸಾದ್ (20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸಮೀಪದ ತರವಾಡಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಅಂಗಡಿ ವರಾಂಡದಲ್ಲಿ ಮೂವರು ವಿಶ್ರಮಿಸುತ್ತಿದ್ದರು. ಈ ಸಂದರ್ಭದಲ್ಲಿ ಅತೀ ವೇಗದಿಂದ ಬಂದ ಕಾರು ಅಂಗಡಿ ವರಾಂಡಕ್ಕೆ ನುಗ್ಗಿ ಘಟನೆ ಸಂಭವಿಸಿದೆ. ಶ್ರೀಲಾಲ್ ರನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ನಿತಿನ್ ರನ್ನು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -