- Advertisement -
- Advertisement -
ಚಿಕ್ಕಮಗಳೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಚಾಲಕ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಹಿರೆಗೌಜ ಸಮೀಪ ಈ ದುರಂತ ಸಂಭವಿಸಿದೆ. ಕಡೂರು ಕಡೆಯಿಂದ ಕಾರು ಚಿಕ್ಕಮಗಳೂರಿನ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಸೇತುವೆಗೆ ಗುದ್ದಿದ ಪರಿಣಾಮವಾಗಿ ಈ ದುರಂತ ನಡೆದಿದೆ.
ಹೊಂಗೆಕಟ್ಟೆ ತಿರುವಿನಲ್ಲಿ ಕಾರು ಸೇತುವೆಗೆ ಡಿಕ್ಕಿ ಹೊಡೆದು ಕೆಳಬಿದ್ದಿದ್ದು, ಅಪಘಾತದ ತೀವ್ರತೆಗೆ ಚಾಲಕ ಗಂಭೀರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ. ನಂತರ ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಗಂಭೀರವಾಗಿ ಗಾಯಕ್ಕೀಡಾಗಿದ್ದ ಚಾಲಕ ಚಿಕಿತ್ಸೆಗೆ ಸ್ಪಂದಿಸದೆ ದುರ್ಮರಣವನ್ನಪ್ಪಿದ್ದಾನೆ.
- Advertisement -