Saturday, May 18, 2024
Homeಕರಾವಳಿಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬಿ.ಎಂ.ಹೆಗ್ಡೆ ಅವರಿಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ!

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬಿ.ಎಂ.ಹೆಗ್ಡೆ ಅವರಿಗೆ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ!

spot_img
- Advertisement -
- Advertisement -

ಮಂಗಳೂರು: ಖ್ಯಾತ ಹೃದ್ರೋಗ ತಜ್ಞ ಡಾ| ಬೆಳ್ಳೆ ಮೋನಪ್ಪ ಹೆಗ್ಡೆ (ಡಾ| ಬಿ. ಎಂ. ಹೆಗ್ಡೆ) ಅವರಿಗೆ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ನಡೆಯಲಿದೆ.

ಡಾ| ಬಿ.ಎಂ.ಹೆಗ್ಡೆಯವರಿಗೆ ಈ ವರ್ಷದ ಜನವರಿಯಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಅವರು ಹೊಸದಿಲ್ಲಿಗೆ ತೆರಳಿದ್ದು ಇಂದು ರಾಷ್ಟ್ರಪತಿ ರಾಮಾನಾಥ ಕೋವಿಂದ್‌ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಅವರಿಗೆ 2010ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಲಾಗಿತ್ತು.ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದ ಡಾ| ಬಿ. ಎಂ. ಹೆಗ್ಡೆಯವರು ವೈದ್ಯಕೀಯ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದ ಕೆಲವೇ ಭಾರತೀಯ ವೈದ್ಯರಲ್ಲಿ ಅಗ್ರಗಣ್ಯರು ಎಂಬ ಹೆಗ್ಗಳಿಕೆಗೆ ಪಾತ್ರರಾದವರು. ಸುಲಭ ಆರೋಗ್ಯ ಚಿಕಿತ್ಸೆ ಮತ್ತು ಅನಾವಶ್ಯಕ ಚಿಕಿತ್ಸೆಗಳ ಬಗ್ಗೆ ಮಾಹಿತಿಯನ್ನು ಒಳಗೊಂಡ ಉಪನ್ಯಾಸಗಳ ಮೂಲಕ ಜನಸಾಮಾನ್ಯರಲ್ಲೂ ಜನಪ್ರಿಯತೆಯನ್ನು ಗಳಿಸಿದ ವೈದ್ಯಶ್ರೇಷ್ಠ. ಡಾ| ಹೆಗ್ಡೆಯವರು ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ ಶಿಕ್ಷಣ ತಜ್ಞರಾಗಿ, ಆರೋಗ್ಯ ಸಲಹೆಗಾರರಾಗಿ, ವಾಗ್ಮಿಯಾಗಿ ತನ್ನದೇ ಆದ ಛಾಪು ಮೂಡಿಸಿದ್ದಾರೆ.

- Advertisement -
spot_img

Latest News

error: Content is protected !!