- Advertisement -
- Advertisement -
ಕಡಬ: ಕರ್ತವ್ಯ ನಿರತ ಕುಟ್ರುಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಆರೋಪದ ಮೇಲೆ ಐವರ ವಿರುದ್ಧ ಕಡಬ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮ ಪಂಚಾಯತ್ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಕರ್ತವ್ಯದ ಮೇರೆಗೆ ತೆರಳಿದ್ದ ಸಂದರ್ಭದಲ್ಲಿ ಹೊಸ್ಮಠ ದೇರಾಜೆ ಕ್ರಾಸ್ ಬಳಿಯ ನಿವಾಸಿ ಯಾಕೂಬ್ ಸೇರಿದಂತೆ ಐವರು ಕಾರನ್ನು ತಡೆದು ಹಲ್ಲೆ ನಡೆಸಿ, ಮೊಬೈಲ್ ಫೋನ್ ಕಸಿದು ದಾಖಲೆಗಳನ್ನು ಡಿಲೀಟ್ ಮಾಡಿದ್ದಾರೆ ಎಂದು ಪಿಡಿಓ ಅವರು ಕಡಬ ಠಾಣೆಗೆ ದೂರು ನೀಡಿದ್ದಾರೆ.
ಯಾಕೂಬ್ ಈಗಾಗಲೇ ಜ್ಯೂಸ್ ಸೆಂಟರ್ ಗೆ ಆಗಮಿಸಿದ ಹುಡುಗಿಯ ಫೋಟೋ ತೆಗೆದು ಸ್ಟೇಟಸ್ ಹಾಕಿದ ವಿಚಾರದಲ್ಲಿ ಬಂಧನದಲ್ಲಿದ್ದು, ಇನ್ನುಳಿದ ನಾಲ್ವರಿಗೆ ಪೊಲೀಸರು ಬಲೆ ಬೀಸಿದ್ದಾರೆ.
- Advertisement -