- Advertisement -
- Advertisement -
ಮಂಗಳೂರು: ಸುರತ್ಕಲ್ ಟೋಲ್ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಪ್ರತಿಭಾ ಕುಳಾಯಿಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ಯಾಮ ಸುದರ್ಶನ ಭಟ್ಗೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಲಾಗಿದೆ.
ನಿರೀಕ್ಷಣಾ ಜಾಮೀನಿಗೆ ಮೊರೆಹೋಗಿದ್ದ ಶ್ಯಾಮ್ ಸುದರ್ಶನ ಭಟ್ಗೆ ನ್ಯಾಯಾಲಯ ನ.9ರವೆರೆಗೆ ಆರೋಪಿಯನ್ನು ಪೊಲೀಸರು ಬಂಧಿಸದಂತೆ ಜಾಮೀನು ನೀಡಿದೆ.ಪ್ರಕರಣದ ಎರಡನೇ ಆರೋಪಿ ಕೆ.ಆರ್.ಶೆಟ್ಟಿಯನ್ನು ಈಗಾಗಲೇ ಬಂಧಿಸಲಾಗಿದೆ.
- Advertisement -