- Advertisement -
- Advertisement -
ಬೈಂದೂರು: ಶಿರೂರಿನಲ್ಲಿ ಟೋಲ್ ಕಂಬಕ್ಕೆ ಆಂಬುಲೆನ್ಸ್ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಮೂವರು ಸಾವನ್ನಪ್ಪಿ ಓರ್ವ ಗಂಭೀರ ಗಾಯಗೊಂಡಿದ್ರು. ಇದೀಗ ನಾಲ್ಕನೇ ವ್ಯಕ್ತಿಯೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ನಲ್ಲಿ ಈ ದುರಂತ ಇಂದು ಸಂಭವಿಸಿತ್ತು. ಹೊನ್ನಾವರದಿಂದ ಕುಂದಾಪುರಕ್ಕೆ ರೋಗಿಗಳನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ,ಚಾಲಕನ ನಿಯಂತ್ರಣ ತಪ್ಪಿ ಟೋಲ್ ಕಂಬಕ್ಕೆ ಬಡಿದು ಪಲ್ಟಿಯಾಗಿತ್ತು. ಗಂಭೀರ ಗಾಯಗೊಂಡವರನ್ನು ಕುಂದಾಪುರದ ಆಸ್ಪತ್ರೆಗೆ ಸೇರಿಸಲಾಗಿತ್ತು.
- Advertisement -