Wednesday, June 3, 2026
Homeಕರಾವಳಿಶಾಸಕ ಹರೀಶ್ ಪೂಂಜ ಅವರಿಗೆ ಬೆದರಿಕೆಯೊಡ್ಡಿದ ಪ್ರಕರಣ: ಬಂಟ್ವಾಳದಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

ಶಾಸಕ ಹರೀಶ್ ಪೂಂಜ ಅವರಿಗೆ ಬೆದರಿಕೆಯೊಡ್ಡಿದ ಪ್ರಕರಣ: ಬಂಟ್ವಾಳದಲ್ಲಿ ಸಿಐಡಿ ಅಧಿಕಾರಿಗಳಿಂದ ತನಿಖೆ ಆರಂಭ

- Advertisement -
- Advertisement -

ಬಂಟ್ವಾಳ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.  ಸಿಐಡಿ ಇನ್ಸ್ಪೆಕ್ಟರ್ ಶಿವರಾಜ್ ಅವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಆಗಮಿಸಿ ಕಡತಗಳ ಪರಿಶೀಲನೆಯ ಮೂಲಕ ತನಿಖೆ ಆರಂಭಿಸಿದ್ದಾರೆ.

ಅ. 18 ರಂದು ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಹರೀಶ್ ಅವರು ಪ್ರಕರಣ ಕಡತವನ್ನು ಬೆಂಗಳೂರು ಸಿಐಡಿ ಕಚೇರಿಗೆ ಹಸ್ತಾಂತರಿಸಿದ್ದರು. ಕಡತ ಹಸ್ತಾಂತರದ ಬೆನ್ನಲ್ಲೇ ಪೊಲೀಸ್ ಇನ್ಸ್ಪೆಕ್ಟರ್, ಪಿಎಸ್‌ಐ ಹಾಗೂ ಇಬ್ಬರು ಸಿಬ್ಬಂದಿಯನ್ನು ಒಳಗೊಂಡ ತಂಡ ಬಂಟ್ವಾಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದೆ.

- Advertisement -

Latest News

error: Content is protected !!