- Advertisement -
- Advertisement -
ಮಂಗಳೂರು: ಹಲವು ದಿನಗಳಿಂದ ಕೋಲಾಹಲ ಎಬ್ಬಿಸಿರುವ ಮಂಗಳೂರಿನಲ್ಲಿನ ಉಗ್ರರ ಪರವಾದ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ಇಂದು ಬಂಧನದಲ್ಲಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ
ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರು ಮೂಲದ ಮಾಝ್ ಮುನೀರ್ (21) ಹಾಗೂ ಮುಹಮ್ಮ ಶಾರೀಕ್ (22) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.ಅಲ್ಲದೆ ಅವರನ್ನು ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೊರೊನಾ ತಪಾಸಣೆ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರನ್ನು ಇಂದು ಕೊರೊನಾ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿ ಪ್ರಕರಣದ ಇತ್ಯರ್ಥ ನಡೆಯಲಿದೆ.
- Advertisement -