ಬಂಟ್ವಾಳ; ಸುಳ್ಳು ದೂರು ನೀಡಿರುವ ಆರೋಪಿಯ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದ ವ್ಯಕ್ತಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಿನಾಂಕ: 13-06-2025 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಉಮ್ಮರ್ ಫಾರೂಕ್ ಎಂಬವರು ಬಂಟ್ವಾಳದ ದೇರಾಜೆ ಬಳಿ ಇಬ್ಬರು ಅಪರಿಚಿತರು ಕೊಲೆ ಮಾಡಲು ಯತ್ನಿಸಿರುವ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸಿದಾಗ ಇದೊಂದು ಸುಳ್ಳು ದೂರು ಅನ್ನೋದು ಗೊತ್ತಾಗಿ ಪೊಲೀಸರು ದೂರುದಾರ ಉಮ್ಮರ್ ಫಾರೂಕ್ ವಿರುದ್ಧವೇ 26-08-2025 ರಂದು ಪ್ರಕರಣ ದಾಖಲಿಸಿಕೊಂಡಿದ್ದರು.
ಈ ವಿಚಾರವಾಗಿ ದಿನಾಂಕ: 28.08.2025 ರಂದು ಫೇಸ್ಬುಕ್ ನ Ashaf Talapady ಎಂಬ ಪೇಜ್ ನಲ್ಲಿ ಕಾನೂನು ಬದ್ಧವಾದ ಆಧಾರಗಳು ಇಲ್ಲವೆಂದು ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಸುಳ್ಳು ಆಪಾದನೆ ಮಾಡಿದ ಅಶ್ರಪ್ ಎಂಬಾತನಿಗೆ ಪೊಲೀಸರು ನೋಟಿಸ್ ಜಾರಿ ಮಾಡಿ ಆತನ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


