- Advertisement -
- Advertisement -
ಬೆಂಗಳೂರು:ಯೂನಿಟೆಕ್ ಎಂಡಿ ಸಂಜಯ್ ಚಂದ್ರ, ಅವರ ತಂದೆ ರಮೇಶ್ ಚಂದ್ರ ಹಾಗೂ ಸೋದರ ಅಜಯ್ ಅವರು ಕೆನರಾ ಬ್ಯಾಂಕಿಗೆ 198 ಕೋಟಿ ರು ವಂಚನೆ ಮಾಡಿದ್ದಾರೆ ಎಂದು ಆರೋಪಿಸಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ಕೆನರಾಬ್ಯಾಂಕಿಗೆ ವಂಚನೆ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಟೆಕ್ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.
ಈಗಾಗಲೇ ಆರೋಪಿಗಳಿಗೆ ಸೇರಿದ ಹಲವು ಕಚೇರಿ, ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.ಸಂಜಯ್ ಚಂದ್ರ ಅವರು 43 ತಿಂಗಳುಗಳ ಬಳಿಕ ಮಧ್ಯಂತರ ಜಾಮೀನು ಪಡೆದು ತಿಹಾರ್ ಜೈಲಿನಿಂದ ಹೊರ ಬಂದಿದ್ದಾರೆ. ಈಗ ಸಿಬಿಐ ಹೊಸದಾಗಿ ಪ್ರಕರಣ ದಾಖಲಿಸಿ ಅವರು ಬಂಧನಕ್ಕೊಳಗಾಗಿದ್ದಾರೆ.
- Advertisement -