ಬೆಂಗಳೂರು: ಸಿಸಿಬಿ ನೋಟಿಸ್ ನೀಡಿದ ಹಿನ್ನೆಲೆ ಇಂದು ರಾಧಿಕಾ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ನಟಿ ರಾಧಿಕಾ ಕುಮಾರಸ್ವಾಮಿ ಅವರ ಮೊಬೈಲ್ ಅನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ಎಸ್ಎಸ್-ಬಿಜೆಪಿ ಮುಖಂಡರ ಹೆಸರು ಹೇಳಿಕೊಂಡು ವಂಚಿಸುತ್ತಿದ್ದ ಆರೋಪದ ಮೇಲೆ ಅರೆಸ್ಟ್ ಆಗಿರುವ ಯುವರಾಜ್ ಅಲಿಯಾಸ್ ಸ್ವಾಮಿ, ಡೀಲ್ವೊಂದರ ಭಾಗವಾಗಿ ರಾಧಿಕಾ ಅವರ ಅಕೌಂಟ್ಗೆ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಮಾಡಿದ್ದಾನೆಂಬ ಆರೋಪ ಕೇಳಿಬಂದಿತ್ತು. ಇದೇ ಪ್ರಕರಣ ಸಂಬಂಧ ರಾಧಿಕಾ ಸಹೋದರ ರವಿರಾಜ್ರನ್ನ ಒಂದು ವಾರದ ಹಿಂದೆ ಸಿಸಿಬಿ ವಿಚಾರಣೆಗೆ ಒಳಪಡಿಸಿತ್ತು.
ಆರೋಪ ಪ್ರಕರಣ ಸಂಬಂಧ ನಿನ್ನೆ ಸಿಸಿಬಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ರಾಧಿಕಾ ಕುಮಾರಸ್ವಾಮಿಗೆ ನೋಟಿಸ್ ನೀಡಿದ್ದರು. ಅದರಂತೆ ರಾಧಿಕಾ ಇಂದು ಸಿಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದು, ತನಿಖೆಯ ಒಂದು ಭಾಗವಾಗಿ ಅವರ ಮೊಬೈಲ್ ಅನ್ನ ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.