Wednesday, June 3, 2026
Homeಕರಾವಳಿಉಡುಪಿಉಡುಪಿ: ಪ್ರತಿ ಮನೆಯಲ್ಲೂ ಹಬ್ಬದ ರೀತಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ್ ಆಚರಿಸಿ: ಸಚಿವ ಸುನಿಲ್...

ಉಡುಪಿ: ಪ್ರತಿ ಮನೆಯಲ್ಲೂ ಹಬ್ಬದ ರೀತಿಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ್ ಆಚರಿಸಿ: ಸಚಿವ ಸುನಿಲ್ ಕುಮಾರ್

- Advertisement -
- Advertisement -

ಉಡುಪಿ: ಹರ್‌ಘರ್ ತಿರಂಗ ಅಭಿಯಾನವನ್ನು ರಾಜ್ಯದ ಪ್ರತೀ ಮನೆ ಮನೆಗಳಲ್ಲಿ ಕುಟುಂಬದ ಎಲ್ಲ ಸದಸ್ಯರು ಒಟ್ಟು ಸೇರಿ, ಹಬ್ಬದ ರೀತಿಯಲ್ಲಿ ಅತ್ಯಂತ ಸಂಭ್ರಮದಿಂದ ಆಚರಿಸುವಂತೆ ಸಚಿವ ಸುನಿಲ್‌ ಕುಮಾರ್ ಜನತೆಗೆ ಕರೆ ನೀಡಿದರು.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ಹರ್‌ ಘ‌ರ್ ತಿರಂಗ ಕಾರ್ಯಕ್ರಮವನ್ನು ಆಯೋಜಿಸುವ ಕುರಿತ ಸಭೆಯಲ್ಲಿ ಸಚಿವ ಸುನಿಲ್‌ ಕುಮಾರ್‌ ಭಾಗವಹಿಸಿದ್ರು. ನಂತರ ಮಾತನಾಡಿದ ಅವರು, ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಪ್ರತಿ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ. ಆದರೆ ಈ ಸಂದರ್ಭದಲ್ಲಿ ರಾಷ್ಟ್ರಧ್ವಜಕ್ಕೆ ಯಾವುದೇ ರೀತಿಯಲ್ಲಿ ಅಪಮಾನ ವಾಗದಂತೆ ಎಚ್ಚರ ವಹಿಸಿ ಎಂದು ಹೇಳಿದರು.

- Advertisement -

Latest News

error: Content is protected !!