ಬೆಳ್ತಂಗಡಿ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಯಶಸ್ವಿ 8 ವರ್ಷಗಳ ಸಮರ್ಥ ಆಡಳಿತವನ್ನು ಪೂರೈಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ, ಬೆಳ್ತಂಗಡಿ ಮಂಡಲದಲ್ಲಿ ನಡೆದ ‘ಸೇವೆ’ ‘ಸುಶಾಸನ’ ‘ ಬಡವರ ಕಲ್ಯಾಣ’ ಎಂಬ ವಿಶಿಷ್ಟ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಸಾಧಕರ ಸಮಾವೇಶದ ಮಾಹಿತಿಯನ್ನು ಒಳಗೊಂಡ “ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಎನ್ನುವ ಕಿರು ಹೊತ್ತಗೆಯನ್ನು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರಿಗೆ ನೀಡಲಾಯಿತು.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ ಪ್ರಹ್ಲಾದ ಜೋಶಿಯವರಿಗೆ,ಬಿಜೆಪಿ ರಾಜ್ಯ ಅಧ್ಯಕ್ಷರೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳೀನ್ ಕುಮಾರ್ ಕಟೀಲ್ ಅವರಿಗೆ, ಕೇಂದ್ರ ಕ್ರೀಡಾ ಮತ್ತು ಯುವಜನ ಸಬಲೀಕರಣ ಸಚಿವರಾದ ಅನುರಾಗ್ ಠಾಕೂರ್ , ಕೇಂದ್ರ ಕೃಷಿ ಮತ್ತು ತೋಟಗಾರಿಕೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರಿಗೆ ” ಮೋದಿಜಿಯವರ ಸಮರ್ಥ ಆಡಳಿತದ 8ನೇ ವರ್ಷದ ಸಂಭ್ರಮಾಚರಣೆ @ ಬೆಳ್ತಂಗಡಿ” ಕಾರ್ಯಕ್ರಮದ ಪುಸ್ತಕದ ನೀಡಲಾಯಿತು. ಈ ಸಂದರ್ಭಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಗೌಡ ನಾವೂರ್, ಶ್ರೀನಿವಾಸ ರಾವ್ ಧರ್ಮಸ್ಥಳ ಜೊತೆಗಿದ್ದರು.