- Advertisement -
- Advertisement -
ಬೆಂಗಳೂರು : ನಾಳೆ ಕೇಂದ್ರ ಬಜೆಟ್ ಮಂಡನೆ ನಡೆಯಲಿದ್ದು2020-21ನೇ ಸಾಲಿನ ಬಜೆಟ್ ಗಾತ್ರದಲ್ಲಿ 25,000 ಕೋಟಿ ರೂ. ಇಳಿಕೆಯಾಗಲಿದೆ ಎಂದು ಈಗಾಗಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದಲ್ಲಿ 2.37 ಲಕ್ಷ ಕೋಟಿ ರೂ. ಮೊತ್ತದ ಬಜೆಟ್ ಮಂಡನೆಯಾಗಿದ್ದರೂ ಕೋವಿಡ್ ವೈರಾಣು ಹಾವಳಿ ಆರ್ಥಿಕತೆಗೆ ಭಾರೀ ಪೆಟ್ಟು ಕೊಟ್ಟಿತ್ತು.
ಕರ್ಣಾಟಕದಲ್ಲಿ ಕೇಂದ್ರ ಬಜೆಟ್ ಅಪಾರ ನಿರೀಕ್ಷೆ ಮೂಡಿಸಿದೆ.ರಾಜ್ಯ ಅತ್ತ ಕೊರೊನಾ ಆರ್ಭಟ, ಇತ್ತ ಪ್ರವಾಹದ ಸಂಕಟ… ಇದರ ನಡುವೆ ಸರಕಾರವು ಆರ್ಥಿಕತೆಯನ್ನು ಹೇಗೋ ಸರಿದೂಗಿಸಿಕೊಂಡು ಆಡಳಿತ ನಡೆಸುತ್ತಿದೆ. ರಾಜ್ಯವು ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರಕಾರದಿಂದ ತೆರಿಗೆ ಪಾಲು ಮತ್ತು ಅನುದಾನ ರೂಪದಲ್ಲಿ 34,045 ಕೋಟಿ ರೂ. ನಿರೀಕ್ಷಿಸಲಾಗಿದೆ.
- Advertisement -