Tuesday, June 30, 2026
Homeಕರಾವಳಿಉಡುಪಿಕುಂದಾಪುರ:ವೃದ್ಧೆಯ ಸರ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು

ಕುಂದಾಪುರ:ವೃದ್ಧೆಯ ಸರ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಕುಂದಾಪುರ : ಕಳೆದ ತಿಂಗಳು ಕುಂದಾಪುರದ ಕಾಳವಾರ ನಡುಬೆಟ್ಟು ಎಂಬಲ್ಲಿ ವೃದ್ಧೆಯ ಚಿನ್ನದ ಸರ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ತಿಲಕ್ ಕುಮಾರ್ ಬಂಧಿತ ಆರೋಪಿ. ಈತನಿಂದ ಕಳವುಗೈದ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಎ.29 ಮಧ್ಯಾಹ್ನ ಕಾಳಾವರ ನಡುಬೆಟ್ಟು ಎಂಬಲ್ಲಿ ವಿಳಾಸ ಕೇಳುವ ನೆಪದಲ್ಲಿ ಬೈಕಿನಲ್ಲಿ ಬಂದ ಅಪರಿಚಿತನೋರ್ವ ವೃದ್ದೆಯೊಬ್ಬರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ. ಪ್ರಕರಣದ ಬೆನ್ನು ಹತ್ತಿದ ಕುಂದಾಪುರ ಗ್ರಾಮಾಂತರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!