Thursday, May 2, 2024
Homeಕರಾವಳಿಉಡುಪಿಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಇದುವರೆಗೂ ಆರೋಪಿಗಳಿಂದ ವಶ ಪಡಿಸಿಕೊಂಡ ವಸ್ತುಗಳ ಮೌಲ್ಯ ಕೇಳಿದ್ರೆ ನೀವು...

ಚೈತ್ರಾ ಕುಂದಾಪುರ ವಂಚನೆ ಪ್ರಕರಣ; ಇದುವರೆಗೂ ಆರೋಪಿಗಳಿಂದ ವಶ ಪಡಿಸಿಕೊಂಡ ವಸ್ತುಗಳ ಮೌಲ್ಯ ಕೇಳಿದ್ರೆ ನೀವು ಶಾಕ್ ಆಗ್ತೀರಾ..

spot_img
- Advertisement -
- Advertisement -

ಬೆಂಗಳೂರು: ಎಂಎಲ್ ಎ ಟಿಕೆಟ್ ಗಾಗಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಷಣಕ್ಕೊಂದು ಟ್ವಿಸ್ಟ್ ಸಿಗುತ್ತಿದ್ದು ಇದುವರೆಗೂ ಆರೋಪಿಗಳಿಂದ ವಶಪಡಿಸಿಕೊಂಡ ವಸ್ತುಗಳ ಮೌಲ್ಯ ಕೇಳಿದ್ರೆ ನೀವು ಶಾಕ್ ಆಗೋದು ಗ್ಯಾರಂಟಿಯ

ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು, ಆರೋಪಿಗಳಿಂದ ಇಲ್ಲಿಯವರೆಗೆ ನಗದು, ಚಿನ್ನ ಸೇರಿ ಒಟ್ಟು 2 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಗುರುವಾರ ವಂಚನೆ ಪ್ರಕರಣದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ‘ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು 8 ಮಂದಿಯನ್ನು ಬಂಧಿಸಲಾಗಿದೆ. ನಗದು ಚಿನ್ನ ಸೇರಿ 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಚೈತ್ರಾ ಕುಂದಾಪುರ ಸೇರಿದಂತೆ ಎಲ್ಲರಿಂದಲೂ ಬೇರೆ ಬೇರೆ ವಸ್ತುಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚೈತ್ರಾ ಕುಂದಾಪುರ ಕಡೆಯಿಂದ ಡಿಡಿ, ಚಿನ್ನಾಭರಣ, ಕಾರು, ನಗದನ್ನು ವಶಕ್ಕೆ ಪಡೆಯಲಾಗಿದೆ. ಹಾಲಶ್ರೀ ಸ್ವಾಮೀಜಿಯವರಿದ್ದ ವಿಜಯಪುರದ ಹಿರೇಹಡಗಲಿಯಲ್ಲಿರುವಂತಹ ಅವರ ಮಠದಲ್ಲಿ 56 ಲಕ್ಷ ರೂ. ನಗದು ಹಾಗೂ ಇನ್ನೊಬ್ಬ ವ್ಯಕ್ತಿಯಿಂದ 20 ಲಕ್ಷ ರೂ. ನಗದು ಸೇರಿದಂತೆ ಈವರೆಗೆ ಒಟ್ಟು 2 ಕೋಟಿಗೂ ಹೆಚ್ಚು ಮೌಲ್ಯದ ವಸ್ತು ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!