Saturday, May 4, 2024
Homeಕರಾವಳಿಉಡುಪಿಈ ಪ್ರಕರಣದಲ್ಲಿ ನನ್ನ ಮಗಳನ್ನು ಬಳಸಿಕೊಳ್ಳಲಾಗಿದೆ; ಚೈತ್ರಾ ಕುಂದಾಪುರ ತಾಯಿ ರೋಹಿಣಿ ಹೇಳಿಕೆ

ಈ ಪ್ರಕರಣದಲ್ಲಿ ನನ್ನ ಮಗಳನ್ನು ಬಳಸಿಕೊಳ್ಳಲಾಗಿದೆ; ಚೈತ್ರಾ ಕುಂದಾಪುರ ತಾಯಿ ರೋಹಿಣಿ ಹೇಳಿಕೆ

spot_img
- Advertisement -
- Advertisement -

ಉಡುಪಿ: ಎಂಎಲ್ಎ ಟಿಕೆಟ್ ಗಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು ಈ ಬಗ್ಗೆ ಆಕೆಯ ತಾಯಿ  ರೋಹಿಣಿ ಪ್ರತಿಕ್ರಿಯೆ ನೀಡಿದ್ದು, ಈ ಪ್ರಕರಣದಲ್ಲಿ ನನ್ನ ಮಗಳನ್ನು ಬಳಸಿಕೊಂಡು ಅವಳನ್ನು ಈ ಸ್ಥಿತಿಗೆ ತರಲಾಗಿದೆ ಎಂದಿದ್ದಾರೆ.


ಮಗಳನ್ನ ಪೊಲೀಸರು ವಶಕ್ಕೆ ಪಡೆದ ದಿನವೇ ಪೊಲೀಸರು ಕರೆ ಮಾಡಿದ್ದರು. ಮಗಳನ್ನ ವಶಕ್ಕೆ ಪಡೆದ ಮಾಹಿತಿ ಜೊತೆಗೆ ಮಗಳೊಂದಿಗೆ ಫೋನ್​ನಲ್ಲೇ ಮಾತನಾಡಿಸಿದ್ದಾರೆ. ಮಗಳು ಧೈರ್ಯ ತೆಗೆದುಕೊಳ್ಳುವಂತೆ ಹೇಳಿದ್ದಾಳೆ. ಏನೂ ಆಗಲ್ಲ ಎಂದು ಭರವಸೆ ನೀಡಿದ್ದಾಳೆ.ಆಕೆ ತನ್ನ ಕೈಯಿಂದ ಹಣ ಹೋದರೂ ಪರವಾಗಿಲ್ಲ ಬೇರೊಬ್ಬರ ಹಣಕ್ಕೆ ಆಸೆ ಪಟ್ಟವಳಲ್ಲ ನನ್ನ ಮಗಳು. ಏನೂ ಮಾಡದಿರುವ ತಪ್ಪಿಗೆ ನನ್ನ ಮಗಳು ಗುರಿಯಾಗಿದ್ದಾಳೆ. ನಮಗೆ ಯಾವ ಚಿಂತೆಯೂ ಆಕೆ ಕೊಡಲ್ಲ ಅವಳೇ ಎಲ್ಲ ನಿಭಾಯಿಸುತ್ತಾಳೆ ಎಂದಿದ್ದಾರೆ.

- Advertisement -
spot_img

Latest News

error: Content is protected !!