- Advertisement -
- Advertisement -
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ನಲ್ಲಿ ದಿನದ 24 ಗಂಟೆಯೂ ಲಘುವಾಹನ ಸಂಚಾರಕ್ಕೆ ಅವಕಾಶ ನೀಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅದೇಶ ಹೊರಡಿಸಿದ್ದಾರೆ.
ಭಾರೀ ಮಳೆಯಿಂದ ಗುಡ್ಡಕುಸಿತ ಉಂಟಾದ ಹಿನ್ನೆಲೆಯಲ್ಲಿ ಬೆಳಗ್ಗೆ 7 ರಿಂದ ಸಂಜೆ 7 ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಸದ್ಯ ಮಳೆ ಕಡಿಮೆಯಾದ ಹಿನ್ನಲೆ ಇಂದಿನಿಂದ ರಾತ್ರಿ ಸಂಚಾರಕ್ಕೂ ಅವಕಾಶ ನೀಡಿದ ಜಿಲ್ಲಾಡಳಿತ ಲಘುವಾಹನಗಳ ಜೊತೆಯಲ್ಲಿ ಕೆಎಸ್ಆರ್ಟಿಸಿ ಮಿನಿ ಬಸ್ಗಳಿಗೂ ಅವಕಾಶ ನೀಡಿದೆ.
- Advertisement -