- Advertisement -
- Advertisement -
ಕಾರ್ಕಳ: ಇಲ್ಲಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟುವಿನ ಜನವಸತಿ ಪ್ರದೇಶದಲ್ಲಿ ಕಳೆದೊಂದು ವಾರದಿಂದ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಕೊನೆಗೂ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದೊಂದು ವಾರದ ಹಿಂದೆ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸ್ಥಳಕ್ಕಾಗಮಿಸಿ ಚಿರತೆ ಸೆರೆಗೆ ಬೋನು ಇರಿಸಿದ್ದರು. ಇದೀಗ ಚಿರತೆ ಬೋನಿಗೆ ಬೀಳುವ ಮೂಲಕ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
- Advertisement -