Friday, May 17, 2024
Homeತಾಜಾ ಸುದ್ದಿಚಿಕ್ಕಮಗಳೂರಿನಲ್ಲಿ ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್ಗಳು ; ಓರ್ವ ಬೈಕ್ ಸವಾರ ಸ್ಥಳದಲ್ಲೇ...

ಚಿಕ್ಕಮಗಳೂರಿನಲ್ಲಿ ಡಿಕ್ಕಿಯ ರಭಸಕ್ಕೆ ಹೊತ್ತಿ ಉರಿದ 2 ಬೈಕ್ಗಳು ; ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು

spot_img
- Advertisement -
- Advertisement -

ಚಿಕ್ಕಮಗಳೂರು : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಎರಡು ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಗೆದ್ದಲಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗ ಕಡೆಯಿಂದ ಹಾಸನ ಕಡೆ ಹೋಗುತ್ತಿದ್ದ ಯೂನಿಕಾರ್ನ್ ಬೈಕ್ ಹಾಗೂ ಬೆಂಗಳೂರು ಕಡೆಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಪಲ್ಸರ್ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಯೂನಿಕಾರ್ನ್ ಬೈಕಿನಲ್ಲಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಸವಾರನನ್ನ ಹಾಸನ ಮೂಲದ 35 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಬೈಕ್​ಗಳು ಡಿಕ್ಕಿಯಾದ ರಭಸಕ್ಕೆ ಮಂಜುನಾಥ್ ಅಪಘಾತದ ಸ್ಥಳದಿಂದ ಸುಮಾರು 15 ಅಡಿ ದೂರಕ್ಕೆ ಹಾರಿ ಬಿದ್ದಿದ್ದಾನೆ. 

ಇನ್ನು ಪಲ್ಸರ್ ಬೈಕ್​​ನಲ್ಲಿದ್ದ ಇಬ್ಬರು ಯುವಕರಲ್ಲಿ ಸಂಜಯ್ ಎಂಬುವನ ಸ್ಥಿತಿ ಗಂಭೀರವಾಗಿದ್ದು, ಮತ್ತೋರ್ವ ಸವಾರ ಗೌತಮ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಅಪಘಾತವನ್ನ ಕಂಡು ಕಡೂರಿನ ಜನರು, ಕಡೂರಿನ ಇತಿಹಾಸದಲ್ಲಿ ಇಂತಹ ಅಪಘಾತ ಕಂಡಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಅಷ್ಟೆ ಅಲ್ಲದೇ ಡಿಕ್ಕಿಯ ರಭಸಕ್ಕೆ ಎರಡು ಬೈಕ್​ಗಳು ಹೊತ್ತಿ ಉರಿದಿದ್ದು ಪೊಲೀಸರು ಕೂಡ ಇದು ಹೇಗೆ ಸಾಧ್ಯ ಎಂದು ಮತ್ತಷ್ಟು ಆಳವಾಗಿ ತನಿಖೆ ಕೈಗೊಂಡಿದ್ದಾರೆ. ಈ ಮಧ್ಯೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹತ್ತಿ ಉರಿಯಲು ಬೈಕ್ ಸವಾರರ ಬಳಿ ಸ್ಯಾನಿಟೈಸರ್ ಇದ್ದು ಈ ಬೆಂಕಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

- Advertisement -
spot_img

Latest News

error: Content is protected !!