ಚಿಕ್ಕಮಗಳೂರು: ನಗರದ ದುಬೈನಗರದಲ್ಲಿ ನಿನ್ನೆ ತಡರಾತ್ರಿ ಅನ್ಯ ಕೋಮಿನ ಯುವಕರ ಗುಂಪು ಹಿಂದು ಕಾರ್ಯನೋರ್ವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರಿಂದ ಯುವಕ ಗಂಬೀರ ಗಾಯಗೊಂಡಿದ್ದ ಗೌರಿಕಾಲುವೆಯ ಮನೋಜ್ (21) ಇಂದು ಮೃತಪಟ್ಟಿದ್ದಾನೆ.
ರಾತ್ರಿ 11 ಗಂಟೆ ಹೊತ್ತಿನಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿತ್ತು. ಮನೋಜ್ ತಲೆಗೆ ಏಟು ಬಿದ್ದು ತೀವ್ರ ಗಾಯವಾಗಿತ್ತು. ಅವರನ್ನು ಚಿಕಿತ್ಸೆಗೆ ಹಾಸನಕ್ಕೆ ಆಸ್ಪತ್ರೆಗೆ ಒಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ಗೆ ಒಯ್ಯುವಾಗ ಮೃತಪಟ್ಟಿದ್ದಾರೆ
ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ನಗರದ ಎಂ.ಜಿ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಾಗಿಲು ಮುಚ್ಚಿಸಿ ಹನುಮಂತಪ್ಪ ವೃತ್ತದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು ಆರೋಪಿಗಳನ್ನು ಬಂಧಿಸುವಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಆಗ್ರಹಿಸಿದರು. ಈ ವೇಳೆ ನಗರದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಪೊಲೀಸರು ಮಧ್ಯಪ್ರವೇಶಿಸಿ ವಾತಾವರಣ ತಿಳಿಗೊಳಿಸಿದರು.
ಹತ್ಯೆ ಮಾಡಿರುವ ಆರೋಪದಡಿ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸಲೀಂ ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಸಿಪಿಐ ಸಲೀಂ ಒಂದು ಕೋಮಿನ ಪರ ಕೆಲಸ ಮಾಡುತ್ತಿದ್ದಾರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.