Friday, June 5, 2026
Homeಇತರಸಾರಾಯಿ ಸಿಗದಿದ್ದಕ್ಕೆ ಬಾವಿಗೆ ಹಾರಿ ಪ್ರಾಣ ಬಿಟ್ಟ !

ಸಾರಾಯಿ ಸಿಗದಿದ್ದಕ್ಕೆ ಬಾವಿಗೆ ಹಾರಿ ಪ್ರಾಣ ಬಿಟ್ಟ !

- Advertisement -
- Advertisement -

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ.

ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು ಗ್ರಾಮದ ಹೊರವಲಯದಲ್ಲಿರುವ ಬಾವಿಯಲ್ಲಿ ಶವ ಪತ್ತೆಯಾಗಿದೆ.

ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಖಡಕಲಾಟ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಖಡಕಲಾಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!