ಬೆಂಗಳೂರು:ಹೃದಯಾಘಾತದಿಂದ ನಿಧನರಾದ ನಟ ಚಿರಂಜೀವಿ ಸರ್ಜಾರ ಅಂತ್ಯಕ್ರಿಯೆ ಇಂದು ಬೆಂಗಳೂರು ದಕ್ಷಿಣ ತಾಲೂಕಿನ ನೆಲಗುಳಿ ಗ್ರಾಮದ ಬಳಿ ನೆರವೇರಿದೆ. ಸಹೋದರ ಧ್ರುವ ಸರ್ಜಾ ಫಾರ್ಮ್ಹೌಸ್ನಲ್ಲಿ ಕುಂಚಿಟಿಗ ಗೌಡ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆಯನ್ನು ಮಾಡಲಾಯಿತು.
ಇದೇ ವೇಳೆ, ನಟ ಚಿರಂಜೀವಿ ಸರ್ಜಾ ಸಮಾಧಿ ಮುಂದೆ ಕ್ರಿಶ್ಚಿಯನ್ ಸಂಪ್ರದಾಯದಂತೆ ನಿಕಟ ಸಂಬಂಧಿಕರು ಪ್ರಾರ್ಥನೆ ಸಲ್ಲಿಸಿದರು.
ಚಿರು ಪತ್ನಿ ಮೇಘನಾ ರಾಜ್ ಹಾಗೂ ಅತ್ತೆ ಪ್ರಮೀಳಾ ಜೋಷಾಯ್ ಸೇರಿದಂತೆ ಕೆಲ ಸಂಬಂಧಿಗಳು ಸಮಾಧಿ ಬಳಿ ಕುಳಿತು ಕ್ರಿಶ್ಚಿಯನ್ ಸಂಪ್ರದಾಯದಂತೆ ಆಂಗ್ಲ ಭಾಷೆ ಹಾಗೂ ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸೋದರ ಮಾವ ಅರ್ಜುನ್ ಸರ್ಜಾ ಭಾವಪರವಶರಾಗಿ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಚಿರು ಸರ್ಜಾರ ಅತ್ತೆ ಮತ್ತು ಹಿರಿಯ ನಟಿ ಪ್ರಮೀಳಾ ಜೋಷಾಯ್ ಕ್ರಿಶ್ಚಿಯನ್ ಧರ್ಮದವರಾಗಿದ್ದು, ಚಿರು-ಮೇಘನಾರ ಮದುವೆ ಕೂಡ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆದಿರುವುದನ್ನು ನಾವಿಲ್ಲಿ ನೆನಪಿಸಬಹುದು.