
ದೇಶಾದ್ಯಂತ ಭಾರಿ ಪ್ರತಿಭಟನೆಗಳು ಮತ್ತು ತೀವ್ರ ರಾಜಕೀಯ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜುಲೈ 25 ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಕಾಕ್ರೋಚ್ ಪಕ್ಷವು ಕೇಂದ್ರ ಸರ್ಕಾರಕ್ಕೆ ತನ್ನ ಉಳಿದ ಮೂರು ಪ್ರಮುಖ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕೆಂದು ಆಗ್ರಹಿಸಿದೆ.
ಸಾಮಾಜಿಕ ಜಾಲತಾಣ ‘X’ ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ CJP, ಆತ್ಮಹತ್ಯೆಯಿಂದ ಮೃತಪಟ್ಟ ಪ್ರತಿ ವಿದ್ಯಾರ್ಥಿಯ ಕುಟುಂಬಕ್ಕೆ ತಲಾ ₹1 ಕೋಟಿ ಪರಿಹಾರ ನೀಡಬೇಕು, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಮತ್ತು RAF ಹಾಗೂ ದೆಹಲಿ ಪೊಲೀಸರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.
ಜೂನ್ 28 ರಿಂದ 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ಬೆಂಬಲದಿಂದ ಈ ಹೋರಾಟಕ್ಕೆ ಹೆಚ್ಚಿನ ಬಲ ಸಿಕ್ಕಿತ್ತು. ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ, ಪಾರದರ್ಶಕತೆ ಮತ್ತು ಸಂಸತ್ತಿನಲ್ಲಿ ಚರ್ಚೆ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ ಬಳಿಕ ವಾಂಗ್ಚುಕ್ ತಮ್ಮ ಸತ್ಯಾಗ್ರಹವನ್ನು ಹಿಂಪಡೆದಿದ್ದರು. ಪ್ರಧಾನ್ ಅವರ ರಾಜೀನಾಮೆಯ ನಂತರ, CJP ಜಂತರ್ ಮಂತರ್ ಸೇರಿದಂತೆ ಇಡೀ ದೇಶವು ಸರ್ಕಾರದಿಂದ ಉಳಿದ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ ಎಂದು ಸ್ಪಷ್ಟಪಡಿಸಿದೆ.


