ಚಿಕ್ಕಮಗಳೂರು; ಕಾಂಗ್ರೆಸ್ ಶಾಸಕನಾಗಿದ್ದರೂ, ನಾನು ಆರ್ ಎಸ್ ಎಸ್ ನ ಸ್ವಯಂ ಸೇವಕ ಎಂದು ಚಿಕ್ಕಮಗಳೂರು ಶಾಸಕ ಎಚ್.ಡಿ ತಮ್ಮಯ್ಯ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಗವನಹಳ್ಳಿ, ರಾಂಪುರ ಗ್ರಾಮಗಳ ಸಾಮಿಲ್ ಮಾಲೀಕರ ಸಂಘ ಏರ್ಪಡಿಸಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದ ಅವರು ಬಿಜೆಪಿಯಲ್ಲಿ 16 ವರ್ಷ ಇದ್ದು ಸಂಘದ ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದೆ, ಈಗಲೂ ಸಂಘದ ಸ್ವಯಂ ಸೇವಕನಾಗಿದ್ದೇನೆ ಎಂದು ಹೇಳಿದ್ದಾರೆ.
ನಾನು ಸಂಘದ ಸ್ವಯಂ ಸೇವಕನಾಗಿ ಕೆಲಸ ಮಾಡಿದ್ದೆ, ಈಗಲೂ ಸಂಘದ ಸ್ವಯಂ ಸೇವಕನಾಗಿ ಇದ್ದೇನೆ. ಆದರೆ ನಾನು ಜಾತ್ಯತೀತ ವ್ಯಕ್ತಿ. ಅಂದರೆ ಎಲ್ಲರನ್ನೂ ಒಟ್ಟಾಗಿ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಾನು ಪ್ರಮಾಣ ವಚನ ಸ್ವೀಕರಿಸುವಾಗ ಕೂಡ ಎಲ್ಲರನ್ನು ಒಟ್ಟಾಗಿ ಕೊಂಡೊಯ್ಯವ ನಿಟ್ಟಿನಲ್ಲಿ ಸ್ವೀಕರಿಸಿದ್ದೇನೆ. ಆದ್ದರಿಂದ ಶಾಂತಿ, ಸುವ್ಯವಸ್ಥೆ ಕಾಪಾಡುವುದು ನನ್ನ ಮೊದಲ ಆದ್ಯತೆ ಎಂದು ಎಚ್ಡಿ ತಮ್ಮಯ್ಯ ಹೇಳಿದ್ದಾರೆ.