Saturday, June 28, 2025
Homeಕರಾವಳಿಪುತ್ತೂರು : ನಾಮಪತ್ರ ಸಲ್ಲಿಸಿದ ಬಳಿಕ ನಾನು ಮಾಡಿದ ಭಾಷಣವನ್ನು ತಿರುಚಲಾಗಿದೆ; ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ...

ಪುತ್ತೂರು : ನಾಮಪತ್ರ ಸಲ್ಲಿಸಿದ ಬಳಿಕ ನಾನು ಮಾಡಿದ ಭಾಷಣವನ್ನು ತಿರುಚಲಾಗಿದೆ; ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸ್ಪಷ್ಟನೆ

spot_img
- Advertisement -
- Advertisement -

ಪುತ್ತೂರು: ನಾಮಪತ್ರ ಸಲ್ಲಿಸಿದ ಬಳಿಕ ನಾನು ಮಾಡಿದ ಭಾಷಣವನ್ನು ತಿರುಚಲಾಗಿದೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸ್ಪಷ್ಟನೆ  ನೀಡಿದ್ದಾರೆ.

ಭ್ರಷ್ಟಾಚಾರಿಗಳಿಗೆ ಬುದ್ಧಿ ಕಲಿಸುತ್ತೇನೆ ಎಂದು ನಾನು ಮಾಡಿರುವ ಭಾಷಣವನ್ನು ಬಿಜೆಪಿ ತಿರುಚಿ ಪತ್ರಿಕಾ ಹೇಳಿಕೆ ನೀಡುತ್ತಿದೆ ಎಂದು ಅಶೋಕ್ ಕುಮಾರ್ ರೈ ಹೇಳಿಕೆ ಸ್ಪಷ್ಟನೆ ನೀಡಿದ್ದಾರೆ. ಭ್ರಷ್ಟಾಚಾರದ ವಿರುದ್ಧ ನಾನು ಹೇಳಿರುವ ಹೇಳಿಕೆಗೆ ಎಂದೂ ಬದ್ಧನಾಗಿದ್ದೇನೆ ಎಂದು ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸ್ಪಷ್ಟನೆ ನೀಡಿದ್ದಾರೆ.

ನಾಮಪತ್ರ ಸಲ್ಲಿಸಿದ ಬಳಿಕ ಭಾಷಣ ಮಾಡಿದ ಅಶೋಕ್ ಕುಮಾರ್ ರೈ ಅವರು ಬಿಜೆಪಿಯವರಿಗೆ ಬುದ್ಧಿ ಕಲಿಸುತ್ತೇನೆ ಎಂಬ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ ಮಾಡಿದ್ದರು. ಈ ಬಗ್ಗೆ ಮಾದ್ಯಮಕ್ಕೆ ಸ್ಪಷ್ಟನೆ ನೀಡಿದ ಅಶೋಕ್ ಕುಮಾರ್ ರೈ ನಾನು ಹೇಳಿರುವುದು ಪುತ್ತೂರಿನಲ್ಲಿ ಅಕ್ರಮ-ಸಕ್ರಮ, 94ಸಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಸಲಾಗಿದೆ. ಬಡವರಿಗೆ ಅನ್ಯಾಯ ಎಸಗಲಾಗಿದೆ. ಅನ್ಯಾಯ ಆದಲ್ಲಿ ಅದನ್ನು ಬಿಡುವ ಪ್ರಶ್ನೆಯೇ ಇಲ್ಲ ಅವರಿಗೆ ಬುದ್ಧಿ ಕಲಿಸುತ್ತೇನೆ ಎಂದಿದ್ದೆ. ನನ್ನ ಭಾಷಣದ ತುಣಕನ್ನು ತಿರುಚಿ ಬಿಜೆಪಿಗರು ಬಳಸಿಕೊಂಡಿದ್ದಾರೆ. ಬಡವರ ಮೇಲೆ ಅನ್ಯಾಯ ನಡೆದಾಗ ನಾನು ಎಂದೂ ಬಡವರ ಪರವಾಗಿರುತ್ತೇನೆ. ಅವರ ಧ್ವನಿಯಾಗಿ ನಿಲ್ಲುತ್ತೇನೆ ಎಂದಿದ್ದಾರೆ.

- Advertisement -
spot_img

Latest News

error: Content is protected !!