ಸುಳ್ಯ: ಉದ್ಯಮಿ ನವೀನ್ ಎಂಬವರನ್ನು ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ವಿರುದ್ದ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರಲ್ಲಿ ಐದನೇ ಆರೋಪಿಯಾಗಿರುವ ನವೀನ್ ರೈ ತಂಬಿನಮಕ್ಕಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣಕ್ಕೂ ತನಗೂ ಸಂಬಂಧವಿಲ್ಲ ಎಂದು ನವೀನ್ ಕುಮಾರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ನವೀನ್ ಕಾಮಧೇನು ಅವರನ್ನು ಆಂಬುಲೆನ್ಸ್ ನಲ್ಲಿ ಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನನ್ನು ಪ್ರಕರಣದ 5ನೇ ಆರೋಪಿಯನ್ನಾಗಿ ಮಾಡಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಾದ ವಿಷಯ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ಆದರೆ ಈ ಘಟನೆಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಮತ್ತು ಇವರ ಯಾವುದೇ ವ್ಯವಹಾರಗಳಲ್ಲಿ ನಾನು ಭಾಗಿಯಾಗಿರುವುದಿಲ್ಲ.
ಈ ಘಟನೆಗೆ ಸಂಬಂಧಿಸದ ನನ್ನ ವಿರುದ್ದ ವಿನಾ ಕಾರಣ ದೂರು ನೀಡಿರುವ ನೀರಜಾಕ್ಷಿ ಅವರು ಮಾಧ್ಯಮಗಳ ಮೂಲಕ ಈ ಕುರಿತು ಸ್ಪಷ್ಟೀಕರಣ ನೀಡಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ