- Advertisement -
- Advertisement -
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ರಾಜ್ಯಾಧ್ಯಕ್ಷರು ಮತ್ತು ಮುಖ್ಯಮಂತ್ರಿ ನಿರ್ಣಯ ಕೈಗೊಳ್ಳುತ್ತಾರೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಉಡುಪಿಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ಸುರೇಶ್ ನಾಯಕ್, ಜಿಲ್ಲೆಯ ಅಭಿಪ್ರಾಯವನ್ನು ರಾಜ್ಯ ಸಮಿತಿ ತಿಳಿಸಿದ್ದೇವೆ, ಪ್ರಮೋದ್ ನಾನು ಟಿಕೆಟ್ ಆಕ್ಷಾಂಕ್ಷಿ ಅಲ್ಲ ಎಂದಿದ್ದಾರೆ, ಆದ್ರೆ ರಾಜಕಾರಣದಲ್ಲಿ ಏನಾದರೂ ಅಗಬಹುದು ಎಂದು ಹೇಳಿದ್ದಾರೆ.
ಎಲ್ಲವೂ ಪಕ್ಷದ ರಾಜ್ಯ ಸಮಿತಿ ಗೆ ಬಿಟ್ಟಿದ್ದು ಎಂದು ಹೇಳಿರುವ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್, ಪ್ರಮೋದ್ ಮಧ್ವರಾಜ್ ರಾಜ್ಯಾಧ್ಯಕ್ಷರು ಮತ್ತು ಮುಖ್ಯ ಮಂತ್ರಿಗಳ ಜೊತೆ ಮಾತಾಡಿದ್ದಾರೆ ಎಂಬ ಮಾಹಿತಿ ಇದೆ, ಆದರೆ ಸೇರ್ಪಡೆ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.
- Advertisement -