Sunday, April 28, 2024
Homeತಾಜಾ ಸುದ್ದಿಇತ್ತೀಚೆಗೆ ನಿಧನರಾದ ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಕುಟುಂಬಕ್ಕೆ ಆಸರೆಯಾದ ಬಸವರಾಜ್ ಬೊಮ್ಮಾಯಿ: ಗುರುಲಿಂಗಸ್ವಾಮಿ ಪತ್ನಿಗೆ...

ಇತ್ತೀಚೆಗೆ ನಿಧನರಾದ ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ಕುಟುಂಬಕ್ಕೆ ಆಸರೆಯಾದ ಬಸವರಾಜ್ ಬೊಮ್ಮಾಯಿ: ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಸಿಎಂ ಆದೇಶ

spot_img
- Advertisement -
- Advertisement -

ಬೆಂಗಳೂರು: ಇತ್ತೀಚೆಗೆ ನಿಧನರಾದ ಸಿಎಂ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಸರೆಯಾಗಿದ್ದಾರೆ.

ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದಂತ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ, ಮೃತ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಆದೇಶಿಸಿದ್ದಾರೆ.

ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಯವರ ಸಚಿವಾಲಯಕ್ಕೆ 115 ಗ್ರೂಪ್-ಸಿ ಗುತ್ತಿಗೆ ಹುದ್ದೆಗಳನ್ನು ನೇಮಕಕ್ಕೆ ಆದೇಶಿಸಲಾಗಿತ್ತು. ಈ ಹುದ್ದೆಗಳಲ್ಲಿ ಒಂದು ಹುದ್ದೆಯ ನೇಮಕಾತಿ ಬಾಕಿ ಉಳಿದಿತ್ತು. ಆ ಹುದ್ದೆಗೆ ಶ್ರೀಮತಿ ದೀಪ ಗುರುಲಿಂಗಸ್ವಾಮಿ ಹೆಚ್ ಬಿ ನೇಮಕ ಮಾಡಲು ಸರ್ಕಾರವು ತೀರ್ಮಾನಿಸಿದೆ ಎಂದಿದ್ದಾರೆ.

ಸರ್ಕಾರದ ತೀರ್ಮಾನದಂತೆ ದೀಪಾ ಗುರುಲಿಂಗಸ್ವಾಮಿ ಅವರನ್ನು, ಮುಖ್ಯಮಂತ್ರಿಗಳ ಸಚಿವಾಲಯದಲ್ಲಿನ ಗ್ರೂಪ್ ಸಿ ಹುದ್ದೆಗೆ ಸಂಚಿತ ವೇತನ ರೂ.30,350ರಂತೆ ದಿನಾಂಕ 06-09-2022ರಿಂದ ಜಾರಿಗೆ ಬರುವಂತೆ ನೇಮಕ ಮಾಡಿಕೊಳ್ಳಲು ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!