Sunday, May 5, 2024
Homeತಾಜಾ ಸುದ್ದಿಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ?!: ಟ್ವೀಟ್ ಮೂಲಕ 'ಸಿಎಂ' ರಿಂದ ಮಹತ್ವದ ಮನವಿ

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ?!: ಟ್ವೀಟ್ ಮೂಲಕ ‘ಸಿಎಂ’ ರಿಂದ ಮಹತ್ವದ ಮನವಿ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ಕೊನೆಗೂ ಸಿಎಂ ಯಡಿಯೂರಪ್ಪ ಮೌನ ಮುರಿದಿದ್ದು, ಟ್ವಿಟರ್ ನಲ್ಲಿ ಮನವಿ ಮಾಡಿದ್ದಾರೆ, ಈ ವಿಚಾರದಲ್ಲಿ ಯಾರೂ ಕೂಡ ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ, ‘ ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ’ ಎಂದಿದ್ದಾರೆ.

- Advertisement -
spot_img

Latest News

error: Content is protected !!