- Advertisement -
- Advertisement -
ಉಡುಪಿ: ನಾಲ್ಕನೇ ವಿಶ್ವ ಬಂಟರ ಸಮ್ಮೇಳನವನ್ನು ಉಡುಪಿಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಅಜ್ಜರಕಾಡಿನ ಮಹಾತ್ಮಾ ಗಾಂಧಿ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾವೇಶ ಆಯೋಜಿಸಲಾಗಿತ್ತು.
ದೀಪ ಬೆಳಗಿ ತೆಂಗಿನ ಕೊಂಬು ಅರಳಿಸಿ ಸಮಾವೇಶ ಉದ್ಘಾಟಿಸಿದ ಸಿಎಂ, ನಿಕುಲೆಗ್ ಮಾತಾ ಎನ್ನ ನಮಸ್ಕಾರ, ಎಂಚ ಉಲ್ಲರ್ ಎಂದು ತುಳುವಿನಲ್ಲಿ ಭಾಷಣ ಆರಂಭಿಸಿದರು.
ಸಮಾವೇಶದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಶಾಸಕರಾದ ಯಶ್ ಪಾಲ್ ಸುವರ್ಣ, ಅಶೋಕ್ ಕುಮಾರ್ ರೈ, ಮಂಜುನಾಥ್ ಭಂಡಾರಿ, ಮಾಜಿ ಸಚಿವ ರಮಾನಾಥ್ ರೈ, ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕರಾದ ಐವಾನ್ ಡಿಸೋಜಾ, ಅಭಯ ಚಂದ್ರ ಜೈನ್ ಮತ್ತು ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು.
- Advertisement -