- Advertisement -
- Advertisement -
ಮಡಿಕೇರಿ: ಕೊಡಗು ಜಿಲ್ಲಾ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಡವ ದಿರಿಸಿನಲ್ಲಿ ಮಿಂಚಿದ್ದಾರೆ.ಶನಿವಾರ ಕೊಡಗು ಜಿಲ್ಲಾ ಪ್ರವಾಸದಲ್ಲಿದ್ದ ಸಿಎಂ, ಅಪ್ಪಚೆಟ್ಟೋಳಂಡ ಪ್ರಾಯೋಜಕತ್ವದಲ್ಲಿ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಆಯೋಜಿಸಲ್ಪಟ್ಟಿದ್ದ 2022-23ನೇ ಸಾಲಿನ ಕೊಡವ ಹಾಕಿ ಉತ್ಸವವನ್ನು ಉದ್ಘಾಟಿಸಿದ್ದರು.
ಈ ವೇಳೆ ಕೊಡವ ದಿರಿಸು ಧರಿಸಿ ಹಾಕಿ ಉತ್ಸವ ಉದ್ಘಾಟನೆ ಮಾಡಿದ ಸಿಎಂ, ವೇದಿಕೆ ಕಾರ್ಯಕ್ರಮದುದ್ದಕ್ಕೂ ಕೊಡವ ಉಡುಗೆ ಪೇಟ ಧರಿಸಿ ಪಾಲ್ಗೊಂಡು ಗಮನ ಸೆಳೆದರು.
ಸಚಿವ ಎಸ್.ಟಿ. ಸೋಮಶೇಖರ್, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೊಡವ ಹಾಕಿ ಅಕಾಡೆಮಿ ನಿರ್ದೇಶಕ ಚೈಯಂಡ ಸತ್ಯ, ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಇದಕ್ಕೂ ಮುನ್ನ ಮಡಿಕೇರಿಯ ಗಾಂಧಿ ಮೈದಾನದಲ್ಲಿ ನಡೆದ ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶವನ್ನೂ ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದ್ದರು.
- Advertisement -