- Advertisement -
- Advertisement -
ಬೆಂಗಳೂರು: ಗ್ರಾಮ ಪಂಚಾಯಿತಿಯ ನೌಕರರ ಸೇವಾ ನಿಯಮಾವಳಿಗಳಿಗೆ ತಿದ್ದುಪಡಿ ತಂದು, ಪಂಚಾಯತ್ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರು ಮತ್ತು ಸದಸ್ಯರ ಅಧಿಕಾರವನ್ನು ಮೊಟಕುಗೊಳಿಸುವ ವರದಿಗಳನ್ನು ತಿರಸ್ಕರಿಸುವ ಮೂಲಕ ಮುಖ್ಯಮಂತ್ರಿಗಳು ತೆರೆ ಎಳೆದಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ರು.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಪಂಚಾಯತ್ ಜನಪ್ರತಿನಿಧಿಗಳ ಆತಂಕವನ್ನು ಗಮನಕ್ಕೆ ತಂದಿದ್ದು, ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ, ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್ ಅಧಿನಿಯಮಗಳ ತಿದ್ದುಪಡಿಗೆ ತರುವ ಪ್ರಸ್ತಾವನೆಯನ್ನು ತಿರಸ್ಕರಿಸಿರುವುದಾಗಿ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
- Advertisement -