- Advertisement -
- Advertisement -
ರಾಮನಗರ: ಶೀಘ್ರದಲ್ಲೇ ಹಾಲಿನ ದರ ಏರಿಕೆಯಾಗುತ್ತೆ ಅಂತಾ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ.ಹಾಲಿನ ದರ ಏರಿಕೆಯಾಗುತ್ತೆ ಅಂತಾ ಕೆಲವು ದಿನಗಳಿಂದ ಸುದ್ದಿ ಕೇಳಿ ಬರುತ್ತಿತ್ತು. ಇದೀಗ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ. ಶೀಘ್ರವೇ ನಂದಿನಿ ಹಾಲಿನ ದರ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ರೈತರಿಗೆ ಅನುಕೂಲವಾಗಲೆಂದು ನಂದಿನ ಹಾಲಿನ ದರವನ್ನು ಹೆಚ್ಚಳ ಮಾಡಲಾಗುತ್ತದೆ. ಇದು ನಿಮಗಾಗಿ ಸರ್ಕಾರ ಮಾಡುತ್ತಿರುವಂತ ಏರಿಕೆಯಾಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮೂಲಕ ಪ್ರತಿ ಲೀಟರ್ ಹಾಲಿನ ಬೆಲೆಯನ್ನು 5 ರೂ. ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
- Advertisement -