- Advertisement -
- Advertisement -
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.ಅಜ್ಜರಕಾಡು ಮೈದಾನದಲ್ಲಿ ನಾಲ್ಕನೇ ವಿಶ್ವ ಬಂಟರ ಸಮ್ಮೇಳನವನ್ನು ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿರುವ ಸಿಎಂ, ಮಧ್ಯಾಹ್ನ 1 ಗಂಟೆಗೆ ರಸ್ತೆ ಮಾರ್ಗವಾಗಿ ಉಡುಪಿಗೆ ತಲುಪಲಿದ್ದಾರೆ
ಸಮ್ಮೇಳನ ಉದ್ಘಾಟನೆಯ ಬಳಿಕ ಸ್ಥಳದಲ್ಲೇ ಉಡುಪಿ ಜಿಲ್ಲೆಯ ವಿವಿಧ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಸಿದ್ದರಾಮಯ್ಯ, ಸಂಜೆ 4 ಗಂಟೆಗೆ ಮಂಗಳೂರಿಗೆ ತೆರಳಲಿದ್ದಾರೆ.
ಅನಂತರ ವಿಮಾನದ ಮೂಲಕ ಸಂಜೆ 5 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
- Advertisement -