- Advertisement -
- Advertisement -
ಸುಳ್ಯ: ಕೊಡಗು ಜಿಲ್ಲಾ ಪ್ರವಾಸ ಮುಗಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದಾರೆ.
ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ
ಭೂಕಂಪನದಿಂದಾಗಿ ಹಾನಿಗೊಳಗಾಗಿದ್ದ ನಾಗೇಶ್ ಎಂಬವರ ಮನೆಗೆ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ.
ಹಾನಿಯಾದ ಮನೆಯಲ್ಲಿದ್ದವರ ಸಮಸ್ಯೆ ಆಲಿಸಿದ ಸಿಎಂ ಬೊಮ್ಮಾಯಿ ಬಳಿಕ ಅವರ ಅಹವಾಲು ಸ್ವೀಕರಿಸಿ ಅಧಿಕಾರಿಗಳಿಗೆ ಪರಿಹಾರ ಕ್ರಮಗಳ ಕುರಿತು ಸೂಚನೆ ನೀಡಿದ್ದಾರೆ.
ಈ ವೇಳೆ ಕಂದಾಯ ಸಚಿವ ಆರ್.ಅಶೋಕ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸುಳ್ಯ ಶಾಸಕ ಮತ್ತು ಸಚಿವ ಎಸ್. ಅಂಗಾರ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಉಪಸ್ಥಿತರಿದ್ದರು.
- Advertisement -