- Advertisement -
- Advertisement -
ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಮರವಂತೆ ಕಡಲ ಕಿನಾರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಲ ಕಿನಾರೆಗೆ ಸಚಿವರು, ಶಾಸಕರು ಮತ್ತು ಅಧಿಕಾರಿಗಳ ಜೊತೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ, ಕಡಲು ಕೊರೆತದ ಸ್ಥಳ ಪರಿಶೀಲನೆ ನಡೆಸಿದರು.
ನಂತರ ಸಿಎಂ ಈ ಕುರಿತು ಸ್ಥಳೀಯ ನಿವಾಸಿಗಳು ಹಾಗೂ ಮೀನುಗಾರರ ಜೊತೆ ಸಮಾಲೋಚನೆ ನಡೆಸಿ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಬಿ.ಎಂ. ಸುಕುಮಾರ ಶೆಟ್ಟಿ ಮತ್ತು ಇತರರು ಉಪಸ್ಥಿರಿದ್ದರು.
- Advertisement -