- Advertisement -
- Advertisement -
ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿಎಂ ಯಡಿಯೂರಪ್ಪ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದೆ.
ಸಿಎಂ ಯಡಿಯೂರಪ್ಪ ಅವರಿಗೆ ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೊರೊನಾ ಟೆಸ್ಟ್ ಮಾಡಿಸಿದಾಗ ಪಾಸಿಟಿವ್ ದೃಢಪಟ್ಟಿದೆ. ಎರಡನೇ ಬಾರಿ ಸಿಎಂಗೆ ಕೋವಿಡ್ ಸೋಂಕು ತಗುಲಿದೆ. ಇದೀಗ ಯಡಿಯೂರಪ್ಪ ಅವರನ್ನು ಮಣಿಪಾಲ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇನ್ನು ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡಿದ್ದರೂ ಮತ್ತೆ ಎರಡನೇ ಬಾರಿ ಕೋವಿಡ್ ಸೋಂಕು ತಗುಲಿರೋದು ಆತಂಕಕ್ಕೆ ಕಾರಣವಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
- Advertisement -