- Advertisement -
- Advertisement -
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಬೆಂಗಳೂರಿನ ಹಲವು ಕಡೆ ಸಿಎಂ ಬೊಮ್ಮಾಯಿ ಫೋಟೊ ಪ್ರಕಟಿಸಿ ಕಾಂಗ್ರೆಸ್ ಕ್ಯೂ ಆರ್ ಕೋಡ್ ಮಾದರಿಯ ಪೋಸ್ಟರ್ ಅಂಟಿಸಿ ಅಭಿಯಾನ ಆರಂಭಿಸಿತ್ತು.
ಇದನ್ನು ಕಂಡು ಸಿಎಂ ಬಸವರಾಜು ಬೊಮ್ಮಾಯಿ ಗರಂ ಆದ ಬೆನ್ನಲ್ಲೇ ಎಫ್ಐಆರ್ ದಾಖಲಾಗಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಗುಪ್ತಚರ ಇಲಾಖೆ ಅಧಿಕಾರಿಗಳು ಮತ್ತು ಹಿರಿಯ ಪೊಲೀಸರ ವಿರುದ್ಧ ಗರಂ ಆಗಿದ್ದಾರೆ. ತಕ್ಷಣ ಪೊಲೀಸರು ಪೋಸ್ಟರ್ಗಳನ್ನು ತೆರವು ಮಾಡಿದ್ದಾರೆ.
ಪೋಸ್ಟರ್ ಅಂಟಿಸಿದವರ ಪತ್ತೆಗೆ ಮುಂದಾಗುತ್ತಿರುವ ಪೊಲೀಸರು ಈಗ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -