- Advertisement -
- Advertisement -
ಗಂಗೊಳ್ಳಿ: ಅವೈಜ್ಞಾನಿಕ ಕಾಮಗಾರಿಯಿಂದಾಗಿ ಗಂಗೊಳ್ಳಿ ಬಂದರಿನ ನಿರ್ಮಾಣ ಹಂತದ ಜೆಟ್ಟಿ ಕುಸಿದಿದೆ. . 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಈ ಕಾಮಗಾರಿಯ ಗುತ್ತಿಗೆದಾರ ನೀಡಿದ್ದ ಕಮಿಷನ್ ಎಷ್ಟು ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ.
ರಾಜ್ಯದ 40% ಕಮಿಷನ್ ಸರ್ಕಾರ ಇಂದು ಕುಂದಾಪುರ ತಾಲೂಕಿನ ಗಂಗೊಳ್ಳಿ ಬಂದರಿನಲ್ಲಿ ಮುಳುಗಿದೆ. 12 ಕೋಟಿ ರೂಪಾಯಿ ವೆಚ್ಚದ ಜಟ್ಟಿ ನಿರ್ಮಾಣ ಹಂತದಲ್ಲೇ ನದಿ ನೀರಿನ ಪಾಲಾಗಿದೆ.
ಈ ಕಾಮಗಾರಿಯಲ್ಲಿ ಗುತ್ತಿಗೆದಾರ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಕಮಿಷನ್ ಎಷ್ಟು ಎನ್ನುವ ಬಗ್ಗೆ ತನಿಖೆಯಾಗಲಿ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇದನ್ನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸಚಿವ ಅಂಗಾರ ಅವರಿಗೆ ಟ್ಯಾಗ್ ಮಾಡಿದ್ದಾರೆ.
- Advertisement -