- Advertisement -
- Advertisement -
ಮಂಗಳೂರು; ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಕುಳಾಯಿ ವಿರುದ್ಧ ಸಾಮಜಿಕ ಜಾಲತಾಣದಲ್ಲಿ ಅವಹೇಳನಾಕಾರಿ ಹಾಗೂ ಅಶ್ಲೀಲವಾಗಿ ಪೋಸ್ಟ್ ಹಾಕಿದ ಆರೋಪಿಗಳನ್ನು ಶೀಘ್ರವಾಗಿ ವಶಕ್ಕೆ ಪಡೆದು ವಿಚಾರಣೆ ನಡೆಸತ್ತೇವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಸುರತ್ಕಲ್ ಟೋಲ್ ಗೇಟ್ ವಿಚಾರದಲ್ಲಿ ಹೋರಾಟ ಎರಡು ಮೂರಿ ದಿನದ ಹಿಂದೆ ನಡೆದಿತ್ತು. ದ ಫೋಟೋ ಬಳಸಿ ಪ್ರತಿಭಾ ಕುಳಾಯಿ ಅವರ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಹಾಕಲಾಗಿತ್ತು. ಈ ಬಗ್ಗೆ ಪ್ರತಿಭಾ ದೂರು ದಾಖಲಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಮೀಷನರ್ ಮಹಿಳಾ ಠಾಣೆಗೆ ವರ್ಗಾಯಿಸಿದ್ದೇವೆ. ಆರೋಪಿಗಳ ಪತ್ತೆಗೆ ಎರಡು ತಂಡಗಳನ್ನು ಮಾಡಿದ್ದೇವೆ. ಶೀಘ್ರವೇ ಆರೋಪಿಗಳಿಗೆ ವಶಕ್ಕೆ ಪಡೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಓರ್ವ ವ್ಯಕ್ತಿ, ಮಾದ್ಯಮ ವಿಭಾಗದಲ್ಲಿ ಇದ್ದಾರೆ ಅವರೇ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅದಲ್ಲದೆ ಇನ್ನಿತರ ಪೋಸ್ಟ್ ಬಗ್ಗೆ ಕೂಡ ತನಿಖೆ ನಡೆಸುವುದಾಗಿ ಹೇಳಿದ್ದಾರೆ.
- Advertisement -