Sunday, June 29, 2025
Homeಕರಾವಳಿದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ...

ದೈವ ನರ್ತಕ ಸಮುದಾಯದ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದವರ ಹಾಗೂ ಅಶ್ಲೀಲವಾಗಿ ನಿಂದಿಸಿದವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಪೊಲೀಸ್ ದೂರು

spot_img
- Advertisement -
- Advertisement -

ಬೆಳ್ತಂಗಡಿ ; ಕಲ್ಜಿಗ ಎಂಬ ಸಿನೇಮಾದಲ್ಲಿರುವ ದೈವ ಕೋಲದ ದೃಶ್ಯಗಳನ್ನು ನಲಿಕೆ ಸಮುದಾಯವರು ಮಾಡಿದ್ದಾರೆ ಎಂದು ಚಿತ್ರತಂಡ ಸುಳ್ಳು ಹೇಳಿರುವುದನ್ನು ಖಂಡಿಸಿ ಹಾಗೂ ದೈವನರ್ತಕರನ್ನು ಕಮೆಂಟ್ ಮೂಲಕ ಅಶ್ಲೀಲವಾಗಿ ನಿಂದಿಸಿದ ವ್ಯಕ್ತಿಯ ವಿರುದ್ಧ ದಲಿತ ದೌರ್ಜನ್ಯ‌ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ನಲಿಕೆ ಸಮಾಜ ಬಾಂಧವರು ಇಂದು ದಿನಾಂಕ 22.09.2024 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಪ್ರಭಾಕರ ಓಡಿಳ್ನಾಳ, ಸಂಘದ ಸದಸ್ಯರಾದ ಸಂತೋಷ್ ನಾರಾವಿ, ಮಾಜಿ ಅಧ್ಯಕ್ಷರಾದ ಸೇಸಪ್ಪ ಅಳದಂಗಡಿ, ಹಿರಿಯ ದೈವ ನರ್ತಕರಾದ ವೀರಪ್ಪ ಈದು, ಗಿರಿಯಪ್ಪ ಎಡ್ತೂರು, ಗೋಪಾಲ ಕೇಲ, ನಾರಾಯಣ ವೇಣೂರು, ಬಾಬು ಪೊಸಲಾಯ ಕಾಂತಪ್ಪ ಪೆರಿಂಜೆ, ರಮೇಶ್‌ ಪೆರಿಂಜೆ, ಪ್ರಮುಖರಾದ ಗಣೇಶ್ ಕೋಟ್ಯಾನ್ ಚಾರ್ಮಾಡಿ, ಹರೀಶ್ ನಾವೂರು, ಶೇಖರ್ ವಾಲ್ಪಾಡಿ, ಸಂಪತ್ ವಾಲ್ಪಾಡಿ, ನಾಗೇಶ್ ಉಡುಪಿ, ರವಿ ಎಂ.ಎಲ್ ಮುಂಡಾಜೆ, ಜಯಂತ ಈದು ಮತ್ತು ನಲಿಕೆ ಸಮಾಜ ಬಂಧುಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!