Monday, June 30, 2025
Homeತಾಜಾ ಸುದ್ದಿಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ, ಮನೆ ಹಾನಿಗೆ 50 ಸಾವಿರ ಪರಿಹಾರ: ಆರ್‌.ಅಶೋಕ್

ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ 5 ಲಕ್ಷ, ಮನೆ ಹಾನಿಗೆ 50 ಸಾವಿರ ಪರಿಹಾರ: ಆರ್‌.ಅಶೋಕ್

spot_img
- Advertisement -
- Advertisement -

ಮಡಿಕೇರಿ: ರಾಜ್ಯದಾದ್ಯಂತ ಎಡೆಬಿಡದೇ ಸುರಿಯುತ್ತಿರುವ ಮಹಾಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಘೋಷಿಸಿದ್ದಾರೆ.

ಸರಣಿ ಭೂಕಂಪನದ ಕೇಂದ್ರ ಬಿಂದು ಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮಕ್ಕೆ ಭೇಟಿ ನೀಡಿ ಮಳೆಹಾನಿ ಸಂತ್ರಸ್ತರೊಂದಿಗೆ ಚರ್ಚಿಸಿದ ಸಚಿವರು ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.

ಧಾರಾಕಾರ ಮಳೆಯಿಂದ ಮನೆ ಸಂಪೂರ್ಣವಾಗಿ ಬಿದ್ದು ನಷ್ಟವಾಗಿದ್ದರೆ 5 ಲಕ್ಷ ರೂ. ಮತ್ತು ಮನೆಗೆ ಹಾನಿಯಾಗಿದ್ದರೆ 50 ಸಾವಿರ ರೂ. ಪರಿಹಾರ ವಿತರಿಸಲು ಬೆಂಗಳೂರಿಗೆ ತಲುಪಿದ ತಕ್ಷಣ ಅಧಿಕೃತ ಆದೇಶ ಹೊರಡಿಸಲಾಗುವುದು. ಮಳೆಹಾನಿ ಪರಿಹಾರ ನೀಡಲು ಹಣದ ಕೊರತೆ ಇಲ್ಲ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!