- Advertisement -
- Advertisement -
ಬೆಂಗಳೂರು: ಸಿದ್ದರಾಮಯ್ಯರನ್ನು ಟಿಪ್ಪು ರೀತಿಯಲ್ಲಿಯೇ ಹೊಡೆದು ಹಾಕಬೇಕು ಎಂದು ಅಶ್ವಥ್ ನಾರಾಯಣ್ ವಿವಾದಾತ್ಮಕ ಹೇಳಿಕೆ ನೀಡಿದ್ದು, ಹಾಗೇ ನಳಿನ್ ಕೂಡಾ ಟಿಪ್ಪು ವಂಶಸ್ಥರನ್ನು ಕೊಲೆ ಮಾಡಬೇಕು ಎಂದು ಹೇಳಿಕೆ ನೀಡಿದ್ರು.
ಹೀಗೆ ಪ್ರಚೋದನಾಕಾರಿ ಹೇಳಿಕ ನೀಡಿದ ಬೆನ್ನಲ್ಲಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಅಶ್ವಥ್ ನಾರಾಯಣ್ ಹಾಗೂ ನಳಿನ್ ಕುಮಾರ್ ಕಟೀಲ್ ವಿರುದ್ಧ ಕಾಂಗ್ರೆಸ್ ನಿಯೋಗ ದೂರು ನೀಡಿದೆ. ಇಬ್ಬರ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ತಮ್ಮ ಹೇಳಿಕೆ ಬಗ್ಗೆ ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆಯನ್ನೂ ಕೊಟ್ಟಿದ್ದಾರೆ. ತನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶವಿರಲಿಲ್ಲ. ಅದು ಸಾಂದರ್ಭಿಕ ಪ್ರಸ್ತಾಪ ಎಂದಿದ್ದಾರೆ.
- Advertisement -