Tuesday, June 16, 2026
Homeಕರಾವಳಿಮಂಗಳೂರುಪ್ರೊ. ಕೆ. ಎಸ್‌. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೂರು

ಪ್ರೊ. ಕೆ. ಎಸ್‌. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೂರು

- Advertisement -
- Advertisement -

ಬೆಳ್ತಂಗಡಿ: ಹಿಂದೂ ಧರ್ಮದ ಆರಾಧ್ಯ ಮೂರ್ತಿ ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೊ. ಕೆ. ಎಸ್‌. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ.16 ರಂದು ಬಿಜೆಪಿ ಯುವ ಮೋರ್ಚಾದಿಂದ  ದೂರು ನೀಡಲಾಗಿದೆ.

ಬೆಳ್ತಂಗಡಿ ಮಂಡಲದ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ರಾತ್ರಿ ತಮ್ಮ ಮೊಬೈಲ್‌ನಲ್ಲಿ ಯೂಟ್ಯೂಬ್ ವೀಕ್ಷಿಸುತ್ತಿದ್ದಾಗ, ‘ವಿಸ್ತಾರ ನ್ಯೂಸ್’ ವಾಹಿನಿಯಲ್ಲಿ ಪ್ರಸಾರವಾದ ಪ್ರೊ. ಕೆ. ಎಸ್. ಭಗವಾನ್ ಅವರ ವಿವಾದಿತ ಹೇಳಿಕೆಯ ವಿಡಿಯೋವೊಂದು ಗಮನಕ್ಕೆ ಬಂದಿದೆ.ಸದ್ರಿ ವಿಡಿಯೋದಲ್ಲಿ ಪ್ರೊ. ಕೆ. ಎಸ್. ಭಗವಾನ್ ಅವರು, “ನೀವು ಪೂಜೆ ಮಾಡುವ ಶ್ರೀರಾಮಚಂದ್ರ ತಂದೆಗೆ ಹುಟ್ಟಿದವನಲ್ಲ. ಹಿಂದೂ ದೇವರುಗಳು ಕೊಲೆ ಮಾಡುವ ದೇವರುಗಳು. ರಾಮನ ತಂದೆ ದಶರಥ ಪುತ್ರಕಾಮೇಷ್ಟಿ ಪೂಜೆ ಮಾಡುತ್ತಾನೆ ಹಾಗೂ ಸ್ವಾಮಿ ವಿವೇಕಾನಂದರು ಹಿಂದೂ ಧರ್ಮವನ್ನು ತ್ಯಜಿಸಿದ್ದರು” ಎಂದು ಹೇಳಿಕೆ ನೀಡಿ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಈಗಾಗಲೇ ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 196(1)(a) ಮತ್ತು 299 ರ ಅಡಿಯಲ್ಲಿ (ಪ್ರಕರಣ ಸಂಖ್ಯೆ: 103/2026) ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಸ್ವೀಕೃತವಾಗಿರುವ ಹೊಸ ದೂರನ್ನು ಠಾಣಾ ದೂರು ಸಂಖ್ಯೆ: P01070260600610 ಕಾನೂನು ಕ್ರಮ ಹಾಗೂ ಮುಂದಿನ ತನಿಖೆಗಾಗಿ ಹರಿಹರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಅಧಿಕೃತವಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ಶಶಿರಾಜ್ ಶೆಟ್ಟಿ, ಜಗದೀಶ್, ಶರತ್, ಪವನ್, ಹರೀಶ್, ಸುದೀ‌ರ್, ಗಣೇಶ್‌, ಇನ್ನಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!