Thursday, April 25, 2024
Homeತಾಜಾ ಸುದ್ದಿ ನಿರ್ಮಾಪಕನಿಗೆ ಜೀವ ಬೆದರಿಕೆ ಹಾಕಿದ ಆರೋಪ:ನಟ ದರ್ಶನ್ ವಿರುದ್ಧ ದೂರು ದಾಖಲು: ಆಡಿಯೋ ವೈರಲ್

 ನಿರ್ಮಾಪಕನಿಗೆ ಜೀವ ಬೆದರಿಕೆ ಹಾಕಿದ ಆರೋಪ:ನಟ ದರ್ಶನ್ ವಿರುದ್ಧ ದೂರು ದಾಖಲು: ಆಡಿಯೋ ವೈರಲ್

spot_img
- Advertisement -
- Advertisement -

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕ್ರಾಂತಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವ ಬೆನ್ನಲ್ಲೇ ಒಂದೊಂದೇ ವಿವಾದಗಳು ಡಿ ಬಾಸ್ ಬೆನ್ನು ಬಿದ್ದಂತೆ ಕಾಣಿಸುತ್ತಿದೆ. ಪುನೀತ್ ಅವರಿಗೆ ಅವಹೇಳನ ಮಾಡಿದ್ದಾರೆ ಎಂದು ಅಪ್ಪು ಅಭಿಮಾನಿಗಳು ಗರಂ ಆಗಿ, ಕೊನೆಗೆ ದರ್ಶನ್ ಅವರು ಕ್ಷಮೆ ಕೇಳಿದ ಬೆನ್ನಲ್ಲೇ ಇದೀಗ ಮತ್ತೊಂದು ಅಪವಾದ ದಚ್ಚು ಬೆನ್ನು ಬಿದ್ದಿದೆ.ದಾಸ ತನಗೆ  ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ ಭರತ್ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ನಿರ್ಮಾಪಕ ಭರತ್, ‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವನ್ನು ಎರಡು ವರ್ಷದ ಹಿಂದೆ ಮುಹೂರ್ತ ಮಾಡಿ ಪ್ರಾರಂಭಿಸಿದ್ದರು.ಆ ಸಿನಿಮಾಕ್ಕೆ ಧೃವನ್ (ಸೂರಜ್) ನಾಯಕ ನಟರಾಗಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾ ಚಿತ್ರೀಕರಣ ತಡವಾಗುತ್ತಾ ಸಾಗಿತ್ತು.

ಸಿನಿಮಾಕ್ಕೆ ಹಣಕಾಸಿನ ಸಮಸ್ಯೆ ಎದುರಾಗಿದ್ದಕ್ಕೆ ಚಿತ್ರೀಕರಣ ತಡವಾಗಿದೆ ಎಂದು ನಿರ್ಮಾಪಕ ಭರತ್, ನಟ ಧ್ರುವನ್ ಬಳಿ ಹೇಳಿದಾಗ, ಧ್ರುವನ್, ದರ್ಶನ್ ಅವರಿಂದ ನಿರ್ಮಾಪಕರಿಗೆ ಕರೆ ಮಾಡಿಸಿದ್ದಾರೆ ಆ ಸಮಯದಲ್ಲಿ ದರ್ಶನ್, ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ ಮಾಡಿಕೊಳ್ಳಲಾಗಿದೆ. ದೂರಿನ ಸಂಬಂಧ ನಾಯಕ ನಟ ಧ್ರುವನ್, ‘ಭಗವಾನ್ ಶ್ರೀ ಕೃಷ್ಣ ಪರಮಾತ್ಮ’ ಸಿನಿಮಾದ ನಿರ್ದೇಶಕ ಆಂಥೊನಿ ಸಿನಿಮಾದ ಕ್ಯಾಮೆರಾಮನ್ ಗಳು ಠಾಣೆಗೆ ಹೋಗಿ ಹೇಳಿಕೆ ನೀಡಿದ್ದಾರೆ.

ದೂರಿಗೆ ಸಂಬಂಧಿಸಿದಂತೆ ದರ್ಶನ್ ಅವರದ್ದು ಎನ್ನಲಾಗುತ್ತಿರುವ ಆಡಿಯೋ ಒಂದು ಹರಿದಾಡುತ್ತಿದ್ದು, ”ನೀನು ಇರಲ್ಲ, ಏನಾದರೂ ಮಾಡುವ ಮುಂಚೆ ಹೇಳಿಯೇ ಮಾಡ್ತೀನಿ ರೆಡಿ ಇರು. ನೀನೆ ಕಾಣಿಸದಂತೆ ಮಾಡಿಬಿಡ್ತೀನಿ ಹುಷಾರಾಗಿರು” ಎಂದು ಹೇಳಿರುವುದು ಆಡಿಯೋದಲ್ಲಿ ದಾಖಲಾಗಿದೆ. ಆ ಧ್ವನಿ ದರ್ಶನ್ ಅವರ ಧ್ವನಿ ಹೋಲುತ್ತಿದೆ.

- Advertisement -
spot_img

Latest News

error: Content is protected !!