- Advertisement -
- Advertisement -
ಉಪ್ಪಿನಂಗಡಿ: ರಸ್ತೆಯಲ್ಲಿ ಸೈಡ್ ಕೊಡುವ ವಿಚಾರದಲ್ಲಿ ಜಗಳಕ್ಕಿಳಿದಿದ್ದ ಐವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸಾರ್ವಜನಿಕ ಶಾಂತಿ ಭಂಗ ಪ್ರಕರಣದಡಿ ಕೇಸು ದಾಖಲಾಗಿದೆ. ನೆಲ್ಯಾಡಿಯ ಬೆಥನಿ ಕಾಲೇಜು ಬಳಿ ಘಟನೆ ನಡೆದಿತ್ತು.
ಆರೋಪಿಗಳಾದ ಮಹೇಶ್ ಕೆ (30), ಅಶ್ವಥ್ (26), ಸ್ವರೂಪ್ ಪಟ್ಟೆ (25), ಅಖಿಲೇಶ್ (21) ಲಕ್ಷ್ಮಣ ಗೌಡ (45) ಎಂಬವರು ಭಯ ಮೂಡಿಸುವ ರೀತಿಯಲ್ಲಿ ಸಂಘರ್ಷ ನಿರತರಾಗಿರುವುದನ್ನು ಕಂಡ ಪೊಲೀಸರು 2 ಬೈಕುಗಳನ್ನು 5 ಮೊಬೈಲ್ ಗಳ ಸಹಿತ ಆರೋಪಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -