Saturday, June 28, 2025
Homeಕರಾವಳಿಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆ; ಬೆಳ್ತಂಗಡಿ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು...

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರೀಶ್ ಪೂಂಜ ವಿವಾದಾತ್ಮಕ ಹೇಳಿಕೆ; ಬೆಳ್ತಂಗಡಿ ಠಾಣೆಯಲ್ಲಿ ಶಾಸಕರ ವಿರುದ್ಧ ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ ; ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ದೂರು ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ದೂರು ದಾಖಲಾಗಿದೆ. ಮಾಜಿ ಶಾಸಕರಾದ ವಸಂತ ಬಂಗೇರರ ಸೂಚನೆಯಂತೆ, ಕೆ ಪಿ ಸಿ ಸಿ ವಕ್ತಾರರಾದ ನ್ಯಾಯವಾದಿ ಸುಧೀರ್ ಕುಮಾರ್ ಮುರೊಳ್ಳಿ ಯವರ ಸಹಕಾರದಲ್ಲಿ ದೂರು ನೀಡಿದ್ದಾರೆ.

ಮಹಿಳಾ ಘಟಕದ ಅಧ್ಯಕ್ಷೆ ನಮಿತಾ ಪೂಜಾರಿ ಅವರು ದೂರು ದಾಖಲಿಸಿದ್ದಾರೆ. ಬೆಳ್ತಂಗಡಿಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಶಾಸಕ ಹರೀಶ್ ಪೂಂಜ ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ನಾಯಕರ ಬಗ್ಗೆ ಗರಂ ಆಗಿದ್ದರು. “ಸತ್ಯಜಿತ್ ಸುರತ್ಕಲ್ ಎಂಬ ಹಿಂದೂ ನಾಯಕ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ “. “24 ಹಿಂದೂ ಕಾರ್ಯಕರ್ತರನ್ನ ಹತ್ಯೆ ಮಾಡಿದ ಸಿದ್ದರಾಮಯ್ಯಗೆ ನೀವು ವೋಟ್ ಕೇಳಿದ್ದೀರಾ. ಭಜರಂಗದಳ ಬ್ಯಾನ್ ಮಾಡುತ್ತೇವೆ  ಎಂದ ಕಾಂಗ್ರೆಸ್ ಪರ ವೋಟ್ ಕೇಳಿದ್ದೀರಾ, ನಿಮ್ಮದು ಯಾವ ರೀತಿಯ ಹಿಂದುತ್ವ ಎಂದು ಜನ ಕೇಳುತ್ತಿದ್ದಾರೆ ಎಂದಿದ್ದರು. ಈ ಹೇಳಿಕೆ ಭಾರೀ ವಿರೋಧ ವ್ಯಕ್ತವಾಗಿದ್ದು . ಬೆಳ್ತಂಗಡಿ ಠಾಣೆಯಲ್ಲಿ ಮಹಿಳಾ ಘಟಕದ ಅಧ್ಯಕ್ಷೆ ನಮಿತಾ ಪೂಜಾರಿ ದೂರು ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!