Tuesday, May 7, 2024
Homeಕರಾವಳಿಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಬೆಳ್ತಂಗಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ; ಬೆಳ್ತಂಗಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಚುನಾವಣಾ ಮಾದರಿ ನೀತಿ ಸಂಹಿತೆ ಇದ್ದರು ನಿಯಮ ಮೀರಿ ಕಾರ್ಯಕ್ರಮ ನಡೆಸಿ ಬಗ್ಗೆ ಚುನಾವಣಾಧಿಕಾರಿಗೆ ಶೇಖರ್ ಲಾಯಿಲ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ವಿಕಾಸ ಹಬ್ಬದ ಹೆಸರಿನಲ್ಲಿ ಮಾ.30 ರಂದು ಸಂಜೆ 7 ಗಂಟೆಗೆ ಬಲಿಂಜೆ ಎಂಬಲ್ಲಿ ರಾತ್ರಿ ಸುಮಾರು 12:25 ರ ವರೆಗೆ ಸಭಾ ಕಾರ್ಯಕ್ರಮ ನಡೆದಿದ್ದು. ಕಾರ್ಯಕ್ರಮದಲ್ಲಿ  ಮತದಾರರಿಗೆ ಊಟೋಪಾಚಾರದ ವದತವಸ್ಥೆ ಮಾಡಲಾಗಿತ್ತು. ಇದರಲ್ಲಿ ಶಾಸಕ ಹರೀಶ್ ಪೂಂಜ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಭಾಗವಹಿಸಿದ್ದರು.

ಕಾರ್ಯಕ್ರಮಲ್ಲಿ ಮತದಾರರನ್ನು ಸೆಳೆಯುವ ಉದ್ದೇಶದಿಂದ ಊಟೋಪಚಾರವನ್ನು ನೀಡಲಾಗಿದೆ. ರಾತ್ರಿ 10 ಗಂಟೆಗೆ ಧ್ವನಿವರ್ಧಕ ಪರವಾನಿಗೆ ಪಡೆದು ಮಧ್ಯರಾತ್ರಿ 12:25 ರ ತನಕ ಕಾನೂನು ಬಾಹಿರ ಸಭಾ ಕಾರ್ಯಕ್ರಮ ಮಾಡಲಾಗಿದೆ. ಇದು ಚುನಾವಣಾ ಮಾದರಿ ನೀತಿ ಸಂಹಿತೆ ಸ್ಪಷ್ಟವಾಗಿ ಉಲ್ಲಂಘನೆಯಾಗಿದೆ. ಈ ಕಾರ್ಯಕ್ರಮದ ಆಯೋಜಕರು ,ಭಾಗವಹಿಸಿದ ಬಿಜೆಪಿ ಪಕ್ಷದ ನಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾ.31 ರಂದು ಚುನಾವಣಾಧಿಕಾರಿಗಳಿಗೆ ಶೇಖರ್ ಲಾಯಿಲ ದೂರು ನೀಡಿದ್ದರು.

ಚುನಾವಣಾಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹೊಸಂಗಡಿ ಚುನಾವಣಾಧಿಕಾರಿಯಾಗಿರುವ ಪಿಡಿಓ ಗಣೇಶ್ ಶೆಟ್ಟಿಯವರು ವರದಿ ನೀಡಿದ್ದು ಅದರಂತೆ ಎ.5 ರಂದು ಬೆಳ್ತಂಗಡಿ ಸಿವಿಲ್ ನ್ಯಾಯಾಧೀಶರು ಮತ್ತು JMFC ನ್ಯಾಯಾಲಯ PCR 17/2023 ರಲ್ಲಿ ಕಾರ್ಯಕ್ರಮ ಆಯೋಜಕ ಹರೀಶ್.ಪಿ ಮೇಲೆ Code Of Criminal Procedur 200, Indian Penal Code188,
Karnataka Police Act 39 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!