Saturday, April 27, 2024
Homeಕರಾವಳಿಮಂಗಳೂರಿನಲ್ಲಿ ಮತ್ತೆ ವಿಕೃತಿ ಮೆರೆದ ಪಾಪಿಗಳು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹ...

ಮಂಗಳೂರಿನಲ್ಲಿ ಮತ್ತೆ ವಿಕೃತಿ ಮೆರೆದ ಪಾಪಿಗಳು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಗೂ ಅವಹೇಳನಕಾರಿ ಬರಹ ಪತ್ತೆ

spot_img
- Advertisement -
- Advertisement -

ಉಳ್ಳಾಲ: ಮಂಗಳೂರಿನಲ್ಲಿ ದೈವ ಸನ್ನಿಧಾನದಲ್ಲಿ ಮತ್ತೆ ಪಾಪಿಗಳು ವಿಕೃತಿ ಮೆರೆದಿದ್ದಾರೆ. ಉಳ್ಳಾಲದ  ಕೇಂದ್ರ ಬಸ್ ನಿಲ್ದಾಣದಲ್ಲಿರುವ ಕೊರಗಜ್ಜ ಮತ್ತು ಗುಳಿಗಜ್ಜನ ಕಟ್ಟೆಯ ಕಾಣಿಕೆ ಹುಂಡಿಗೆ ಯಾರೋ ಕಿಡಿಗೇಡಿಗಳು ಕಾಂಡೋಮ್ ಗಳನ್ನು ಹಾಕಿದ್ದಲ್ಲದೆ, ಸಿಎಂ ಬಿಎಸ್ ವೈ ಮತ್ತು ಅವರ ಪುತ್ರನ ಭಾವಚಿತ್ರಕ್ಕೆ ಶಿಲುಬೆಯ ಚಿತ್ರ ಬಿಡಿಸಿ, ಬಿಜೆಪಿ ನಾಯಕರ ಚಿತ್ರಗಳನ್ನು ವಿರೂಪಗೊಳಿಸಿ ತಮ್ಮ ವಿಕೃತ ಬುದ್ಧಿ ತೋರಿಸಿದ್ದಾರೆ.

ಪ್ರತೀ ತಿಂಗಳ ಸಂಕ್ರಾತಿಯಂದು ಇಲ್ಲಿನ ಸೇವಾ ಸಮಿತಿಯವರು ಕಾಣಿಕೆ ಡಬ್ಬಿಯ ಹಣ ತೆಗೆಯುವ ವಾಡಿಕೆಯಿದ್ದು, ಈ ಬಾರಿ ಸ್ವಲ್ಪ ತಡವಾಗಿ ಮಂಗಳವಾರ ಸಂಜೆ ಕಾಣಿಕೆ‌ ಡಬ್ಬಿ ತೆರೆದು ನೋಡಿದಾಗ ಕಾಂಡೋಮ್ ಗಳು ಮತ್ತು ಪ್ರಚೋದನಕಾರಿ ಬರಹಗಳಿದ್ದ ಬೆಂಗಳೂರಿನ K.R.I.D .L ನಿಗಮ ಅಧ್ಯಕ್ಷ ಎಂ.ರುದ್ರೇಶ್ ಅವರಿಗೆ ಶುಭಕೋರಿದ ಪ್ಲೆಕ್ಸ್ ಒಂದು ಲಭಿಸಿದೆ. ಇದರಲ್ಲಿ ಸಿಎಂ ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಅಮಿತ್ ಷಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರ ಭಾವ ಚಿತ್ರಗಳಿದ್ದು ಎಲ್ಲವನ್ನೂ ಗೀಚಿ ವಿರೂಪಗೊಳಿಸಲಾಗಿದೆ. ಅಲ್ಲದೇ ಬಿ.ಎಸ್.ವೈ ಮತ್ತು ಅವರ ಪುತ್ರ ವಿಜಯೇಂದ್ರ ಫೋಟೊದ ಕತ್ತಲ್ಲಿ ಶಿಲುಬೆಯ ಹಾರದ ಚಿತ್ರ ಬಿಡಿಸಲಾಗಿದೆ.

ದೇವಲೋಕದಿಂದ ಹೊರಹಾಕಲ್ಪಟ್ಟ ದ್ರೋಹಿ ದೂತರುಗಳು ಸೇಡಿನ ಸ್ವಭಾವ ಹೊಂದಿದ್ದು ವಿಗ್ರಹಗಳ ಮೂಲಕ ಭೂಲೋಕದ ಜನರನ್ನು ಭ್ರಷ್ಟರನ್ನಾಗಿಸಿ ನಕಲಿ ದೇವರಾಗಿ ಅನಾದಿ ಕಾಲದಿಂದ ಮೆರೆಯಲ್ಪಡುತ್ತಿವೆ, ಎಚ್ಚರ. ರಕ್ತ ಹೀರುವ ಸೊಳ್ಳೆಗಳಂತೆ ಜನರನ್ನು ದೋಚಿ, ಬಾಚಿ ತಿಂದು ತೇಗುವ ಈ ಹಡಬೆ ರಾಜಕಾರಣಿಗಳನ್ನು ಅಟ್ಟಾಡಿಸಿ ಹೊಡೆದು ಕೊಲ್ಲ ಬೇಕಾಗಿದೆ. ಜನರು ಸಿದ್ಧರಾಗಬೇಕು ಎಂದು ಪ್ಲೆಕ್ಸಲ್ಲಿ ಬರೆಯಲಾಗಿದೆ. ಈ ಕುರಿತು ಕೊರಗಜ್ಜ ಸೇವಾ ಸಮಿತಿಯವರು ಉಳ್ಳಾಲ ಠಾಣೆಗೆ ದೂರು ನೀಡಿದ್ದು, ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಇನ್ನು ಕೆಲ ದಿನಗಳ ಹಿಂದೆ ಕೊಟ್ಟಾರ ಚೌಕಿ ಬಳಿ ಇರುವ ಕಲ್ಲುರ್ಟಿ, ಪಂಜುರ್ಲಿ, ಹಾಗೂ ಅತ್ತಾವರ ಸಮೀಪದ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದಲ್ಲೂ ಪಾಪಿಗಳು ಈ ರೀತಿ ವಿಕೃತಿ ಮೆರೆದಿದ್ದರು.

- Advertisement -
spot_img

Latest News

error: Content is protected !!